"100 ರೈಲುಗಳು ಬಂದರೂ ಹಳಿ ಮೇಲೆ ನಿಂತಿರುವವರು ಕದಲುವುದಿಲ್ಲ": ಅಪಘಾತಕ್ಕೂ ಕೆಲವೇ ಕ್ಷಣಗಳ ಮೊದಲು ಆಯೋಜರ ಮಾತು! 
ದೇಶ

'100 ರೈಲುಗಳು ಬಂದರೂ, ನಿಂತಿರುವವರು ಕದಲುವುದಿಲ್ಲ': ಅಪಘಾತಕ್ಕೂ ಕೆಲವೇ ಕ್ಷಣಗಳ ಮೊದಲು ಆಯೋಜರ ಮಾತು!

ಅಮೃತಸರದಲ್ಲಿ ವಿಜಯದಶಮಿ ವೇಳೆ ನಡೆಯುತ್ತಿದ್ದ ರಾವಣ ದಹನ ಕಾರ್ಯಕ್ರಮದಲ್ಲಿ ನಡೆದ ರೈಲು ಅಪಘಾತದ ಬಗ್ಗೆ ಹೊಸ ಮಾಹಿತಿಯೊಂದು ಲಭ್ಯವಾಗಿದ್ದು...

ಅಮೃತ್ ಸರ: ಅಮೃತಸರದಲ್ಲಿ ವಿಜಯದಶಮಿ ವೇಳೆ ನಡೆಯುತ್ತಿದ್ದ ರಾವಣ ದಹನ ಕಾರ್ಯಕ್ರಮದಲ್ಲಿ ನಡೆದ ರೈಲು ಅಪಘಾತದ ಬಗ್ಗೆ ಹೊಸ ಮಾಹಿತಿಯೊಂದು ಲಭ್ಯವಾಗಿದ್ದು, ರೈಲು ಹಳಿ ಬಳಿ ಕಾರ್ಯಕ್ರಮ ಆಯೋಜನೆ ಮಾಡಿದ್ದವರು 100 ರೈಲುಗಳು ಬಂದರೂ ಹಳಿ ಮೇಲೆ ನಿಂತಿರುವವರು ಕದಲುವುದಿಲ್ಲ ಎಂದು ಹೇಳಿರುವುದು ಬಹಿರಂಗವಾಗಿದೆ. 
ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ ನವ್ ಜೋತ್ ಕೌರ್ ಸಿಧು ಆಗಮಿಸಿದ್ದರು. ಅವರನ್ನು ಸ್ವಾಗತಿಸುತ್ತಿದ್ದ ಕಾರ್ಯಕ್ರಮದ ಆಯೋಜಕರು, "ಮೈದಾನದ ಒಳಗೆ ಅಥವಾ ಹೊರಗೆ ನಿಂತಿರುವವರು ನವ್ ಜೋತ್ ಕೌರ್ ಸಿಧು ಅವರನ್ನು ನೋಡಲು ಎಷ್ಟು ಕಾತುರರಾಗಿದ್ದಾರೆ ಎಂದರೆ ಹಳಿ ಬಳಿ ನಿಂತಿರುವವರು 100 ರೈಲುಗಳು ಬಂದರೂ ಅಲ್ಲಿಂದ ಕದಲುವುದಿಲ್ಲ ಎಂಬ ಮಾತನ್ನಾಡಿದ್ದರು. 
ಮುಖ್ಯ ಅತಿಥಿಯಾಗಿ ಕಾರ್ಯಕ್ರಮಕ್ಕೆ ಬಂದಿದ್ದ ನವ್ ಜೋತ್ ಕೌರ್ ಅವರನ್ನು ಸ್ವಾಗತಿಸಿದ್ದ ಆಯೋಜಕರು, ತಮ್ಮ ಭಾಷಣದಲ್ಲಿ "5,000 ಜನರು ರೈಲ್ವೆ ಹಳಿಯ ಮೇಲೆ ನಿಮ್ಮನ್ನು ನೋಡಲೆಂದೇ ನಿಂತಿದ್ದಾರೆ. 500 ರೈಲುಗಳು ಬಂದರಲ್ಲೂ ಅವರು ಅಲ್ಲಾಡುವುದಿಲ್ಲ ಎಂದು ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT