ಭಾರತ ನೇತಾಜಿ ಕಲ್ಪನೆಯ ಸೇನೆಯನ್ನು ನಿರ್ಮಿಸುತ್ತಿದೆ: ಪ್ರಧಾನಿ ನರೇಂದ್ರ ಮೋದಿ 
ದೇಶ

ಭಾರತ ನೇತಾಜಿ ಕಲ್ಪನೆಯ ಸೇನೆಯನ್ನು ನಿರ್ಮಿಸುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ನೇತಾಜಿ ಸುಭಾಷ್ ಚಂದ್ರ ಬೋಸರು ರಾಷ್ಟ್ರ ನಿರ್ಮಾಣದಲ್ಲಿ ಈಶಾನ್ಯ ರಾಜ್ಯಗಳ ಮಹತ್ವವನ್ನು ಮನಗಂಡಿದ್ದರು, ಅಂತೆಯೇ ನಮ್ಮ ಸರ್ಕಾರ ಸಹ ಈಶಾನ್ಯ ರಾಜ್ಯಗಳ ಮಹತ್ವವನ್ನು ಅರಿತಿದೆ ಎಂದು ಪ್ರಧಾನಿ

ನೇತಾಜಿ ಸುಭಾಷ್ ಚಂದ್ರ ಬೋಸರು ರಾಷ್ಟ್ರ ನಿರ್ಮಾಣದಲ್ಲಿ ಈಶಾನ್ಯ ರಾಜ್ಯಗಳ ಮಹತ್ವವನ್ನು ಮನಗಂಡಿದ್ದರು, ಅಂತೆಯೇ ನಮ್ಮ ಸರ್ಕಾರ ಸಹ ಈಶಾನ್ಯ ರಾಜ್ಯಗಳ ಮಹತ್ವವನ್ನು ಅರಿತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 
ಅ.21 ರಂದು ನೇತಾಜಿ ಸುಭಾಷ್ ಚಂದ್ರ ಬೋಸರು ಸ್ಥಾಪಿಸಿದ್ದ ಆಝಾದ್ ಹಿಂದ್ ಫೌಜ್ ನ 75 ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ದೆಹಲಿಯ ಕೆಂಪು ಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ನೇತಾಜಿ ಬೋಸರ ನೇತೃತ್ವದಲ್ಲಿ ಆಝಾದ್ ಹಿಂದ್ ಫೌಜ್ ನ ಸಾಧನೆಗಳನ್ನು ಸ್ಮರಿಸಿದ್ದು, ಸೂರ್ಯ ಮುಳುಗದ ಸಾಮ್ರಾಜ್ಯದವರ ವಿರುದ್ಧ ನೇತಾಜಿ ಜನತೆಯನ್ನು ಒಗ್ಗೂಡಿಸಿದ್ದರು ಎಂದು ಹೇಳಿದ್ದಾರೆ. 
"ಸ್ವಾಮಿ ವಿವೇಕಾನಂದರಿಂದ ಸುಭಾಷ್ ಚಂದ್ರ ಬೋಸರು ಪ್ರೇರಣೆ ಪಡೆದಿದ್ದರು. ಬದಲಾದ ಕಾಲಘಟ್ಟಕ್ಕೆ ತಕ್ಕಂತೆ ಹೋರಾಟ ನಡೆಸುತಿದ್ದ ಬೋಸರು ಕಾಂಗ್ರೆಸ್ ನ  ಬದಲಾಗಿ ಸಶಸ್ತ್ರ ಹೋರಾಟವನ್ನು ಪ್ರಾರಂಭಿಸಿದ್ದರು. ದಕ್ಷಿಣ ಆಫ್ರಿಕಾದ ವಿದ್ಯಾರ್ಥಿ ಚಳುವಳಿಯ ನಾಯಕರು ಬೋಸರನ್ನು ತಮ್ಮ ಹಿರೋ ಎಂದು ಪರಿಗಣಿಸಿದ್ದರೆಂದು ನೆಲ್ಸನ್ ಮಂಡೇಲಾ ಬೋಸರ ಬಗ್ಗೆ ಹೇಳಿದ್ದರು.  ಪ್ರತಿಯೊಬ್ಬರಿಗೂ ಸಮಾನ ಹಕ್ಕು ಹಾಗೂ ಅವಕಾಶಗಳಿರುವ, ತನ್ನ ಸಂಪ್ರದಾಯಗಳ ಬಗ್ಗೆ ಹೆಮ್ಮೆ ಇರುವ ಎಲ್ಲಾ ರಂಗಗಳಲ್ಲಿಯೂ ಬೆಳವಣಿಗೆ ಸಾಧಿಸುವ ಸಂವೃದ್ಧ  ರಾಷ್ಟ್ರದ ಕಲ್ಪನೆಯನ್ನು ಬೋಸರು ಹೊಂದಿದ್ದರು. ಸ್ವಾತಂತ್ರ್ಯಾ ನಂತರ ಭಾರತ ಸಾಕಷ್ಟು ಮುಂದೆ ಬಂದಿದೆ. ಆದರೆ ನ್ ಅವರ ಪರಿಕಲ್ಪನೆಯಲ್ಲಿದ್ದ ದೇಶವಾಗಿಲ್ಲ" ಎಂದು ಮೋದಿ ಹೇಳಿದ್ದಾರೆ. 
ನೇತಾಜಿ ಸುಭಾಷ್ ಚಂದ್ರ ಬೋಸರ ಕಲ್ಪನೆಯ ಸೇನೆಯನ್ನು ಭಾರತ ನಿರ್ಮಿಸುತ್ತಿದೆ,  ನೇತಾಜಿ ಅವರಿಗೆ ಸಂಬಂಧಿಸಿದ ರಹಸ್ಯ ಕಡತಗಳನ್ನು ಬಹಿರಂಗಗೊಳಿಸುವ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಂಡಿತು. ಈಗ ನೇತಾಜಿ ಅವರ ಗೌರವಾರ್ಥ ಪ್ರಶಸ್ತಿಯೊಂದನ್ನು ಸ್ಥಾಪಿಸಲಾಗುತ್ತಿದೆ ಎಂದು ಪ್ರಧನಿ ಮೋದಿ ಘೋಷಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT