ಕರುಣಾ ಶುಕ್ಲಾ 
ದೇಶ

ಛತ್ತೀಸ್ ಗಡ ಚುನಾವಣೆ: ಮುಖ್ಯಮಂತ್ರಿ ರಮಣ್ ಸಿಂಗ್ ವಿರುದ್ಧ ವಾಜಪೇಯಿ ಸೋದರಿಯ ಪುತ್ರಿ ಕರುಣಾ ಶುಕ್ಲಾ ಸ್ಪರ್ಧೆ !

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಲಾಲ್ ಕೃಷ್ಣ ಅಡ್ವಾಣಿಯಿಂದ ಸ್ಥಾಪನೆಯಾಗಿದ್ದ ಬಿಜೆಪಿ ತನ್ನ ಮೌಲ್ಯಗಳು ಹಾಗೂ ಸಂಸ್ಕೃತಿಯನ್ನು ಕಳೆದುಕೊಂಡಿದೆ ಎಂದು ಮಾಜಿ ಪ್ರದಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸೋದರಿಯ ಮಗಳು ಕರುಣಾ ಶುಕ್ಲಾ ಆರೋಪಿಸಿದ್ದಾರೆ.

ನವದೆಹಲಿ:ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಬಿಂಬಿಸಲಾಗುತ್ತಿರುವ ಪಂಚ ರಾಜ್ಯಗಳ ಚುನಾವಣಾ ಕಣ ದಿನದಿಂದ ದಿನಕ್ಕೆ ಕುತೂಹಲವನ್ನು ಕೆರಳಿಸುತ್ತಿದ್ದು, ಛತ್ತೀಸ್ ಗಡದ ಮುಖ್ಯಮಂತ್ರಿ ಡಾ. ರಮಣ್ ಸಿಂಗ್ ವಿರುದ್ಧ ಮಾಜಿ ಪ್ರದಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸೋದರಿಯ ಮಗಳು ಕರುಣಾ ಶುಕ್ಲಾ  ಸ್ಪರ್ಧಿಸುತ್ತಿದ್ದಾರೆ.

32 ವರ್ಷ ಬಿಜೆಪಿ ಪಕ್ಷದಲ್ಲಿಯೇ ಇದ್ದ ಕರುಣಾ ಶುಕ್ಲಾ , ಕೆಲ ವರ್ಷಗಳಿಂದ ಬಿಜೆಪಿ ತೊರೆದಿದ್ದು, ಈಗ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಡಾ. ರಮಣ್ ಸಿಂಗ್ ಸ್ಪರ್ಧಿಸಲಿರುವ ರಾಜ್ ನಂದ್ಗಾನ್  ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿದ ಕರುಣಾ ಶುಕ್ಲಾ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಲಾಲ್ ಕೃಷ್ಣ ಅಡ್ವಾಣಿಯಿಂದ ಸ್ಥಾಪನೆಯಾಗಿದ್ದ ಬಿಜೆಪಿ ತನ್ನ ಮೌಲ್ಯಗಳು ಹಾಗೂ ಸಂಸ್ಕೃತಿಯನ್ನು ಕಳೆದುಕೊಂಡಿದೆ ಎಂದು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ 32 ವರ್ಷ ಪಕ್ಷದಲ್ಲಿದ್ದ ತಾವೂ ಕೆಲ ವರ್ಷಗಳಿಂದ ಬಿಜೆಪಿಯೊಂದಿಗಿನ ಸಂಪರ್ಕ ಕಳೆದುಕೊಂಡಿದ್ದಾಗಿ ಹೇಳಿದ್ದಾರೆ

15 ವರ್ಷಗಳಿಂದಲೂ ಛತ್ತೀಸ್ ಗಡದ ಮುಖ್ಯಮಂತ್ರಿಯಾಗಿರುವ ಹಾಗೂ 10 ವರ್ಷಗಳಿಂದಲೂ ರಾಜ್ ನಂದ್ಗಾನ್   ಶಾಸಕರಾಗಿರುವ  ಡಾ. ರಣಮ್ ಸಿಂಗ್,  ಜನರ ಒಳಿತಿಗಾಗಿ ಏನೂ ಮಾಡಿಲ್ಲ.  ಅದಕ್ಕಾಗಿ ಜನರ ಒಳಿತಿಗಾಗಿ ಹೋರಾಡುವಂತೆ ತಮ್ಮನ್ನು ಕಾಂಗ್ರೆಸ್ ಅಧ್ಯಕ್ಷರು ಕಳುಹಿಸಿರುವುದಾಗಿ  ಕರುಣ ಶುಕ್ಲಾ ತಿಳಿಸಿದ್ದಾರೆ.

ನವೆಂಬರ್ 12 ರಂದು ಛತ್ತೀಸ್ ಗಡ ವಿಧಾನಸಭೆಯ ಮೊದಲ ಹಂತದ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT