ಕರುಣಾ ಶುಕ್ಲಾ 
ದೇಶ

ಛತ್ತೀಸ್ ಗಡ ಚುನಾವಣೆ: ಮುಖ್ಯಮಂತ್ರಿ ರಮಣ್ ಸಿಂಗ್ ವಿರುದ್ಧ ವಾಜಪೇಯಿ ಸೋದರಿಯ ಪುತ್ರಿ ಕರುಣಾ ಶುಕ್ಲಾ ಸ್ಪರ್ಧೆ !

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಲಾಲ್ ಕೃಷ್ಣ ಅಡ್ವಾಣಿಯಿಂದ ಸ್ಥಾಪನೆಯಾಗಿದ್ದ ಬಿಜೆಪಿ ತನ್ನ ಮೌಲ್ಯಗಳು ಹಾಗೂ ಸಂಸ್ಕೃತಿಯನ್ನು ಕಳೆದುಕೊಂಡಿದೆ ಎಂದು ಮಾಜಿ ಪ್ರದಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸೋದರಿಯ ಮಗಳು ಕರುಣಾ ಶುಕ್ಲಾ ಆರೋಪಿಸಿದ್ದಾರೆ.

ನವದೆಹಲಿ:ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಬಿಂಬಿಸಲಾಗುತ್ತಿರುವ ಪಂಚ ರಾಜ್ಯಗಳ ಚುನಾವಣಾ ಕಣ ದಿನದಿಂದ ದಿನಕ್ಕೆ ಕುತೂಹಲವನ್ನು ಕೆರಳಿಸುತ್ತಿದ್ದು, ಛತ್ತೀಸ್ ಗಡದ ಮುಖ್ಯಮಂತ್ರಿ ಡಾ. ರಮಣ್ ಸಿಂಗ್ ವಿರುದ್ಧ ಮಾಜಿ ಪ್ರದಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸೋದರಿಯ ಮಗಳು ಕರುಣಾ ಶುಕ್ಲಾ  ಸ್ಪರ್ಧಿಸುತ್ತಿದ್ದಾರೆ.

32 ವರ್ಷ ಬಿಜೆಪಿ ಪಕ್ಷದಲ್ಲಿಯೇ ಇದ್ದ ಕರುಣಾ ಶುಕ್ಲಾ , ಕೆಲ ವರ್ಷಗಳಿಂದ ಬಿಜೆಪಿ ತೊರೆದಿದ್ದು, ಈಗ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಡಾ. ರಮಣ್ ಸಿಂಗ್ ಸ್ಪರ್ಧಿಸಲಿರುವ ರಾಜ್ ನಂದ್ಗಾನ್  ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿದ ಕರುಣಾ ಶುಕ್ಲಾ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಲಾಲ್ ಕೃಷ್ಣ ಅಡ್ವಾಣಿಯಿಂದ ಸ್ಥಾಪನೆಯಾಗಿದ್ದ ಬಿಜೆಪಿ ತನ್ನ ಮೌಲ್ಯಗಳು ಹಾಗೂ ಸಂಸ್ಕೃತಿಯನ್ನು ಕಳೆದುಕೊಂಡಿದೆ ಎಂದು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ 32 ವರ್ಷ ಪಕ್ಷದಲ್ಲಿದ್ದ ತಾವೂ ಕೆಲ ವರ್ಷಗಳಿಂದ ಬಿಜೆಪಿಯೊಂದಿಗಿನ ಸಂಪರ್ಕ ಕಳೆದುಕೊಂಡಿದ್ದಾಗಿ ಹೇಳಿದ್ದಾರೆ

15 ವರ್ಷಗಳಿಂದಲೂ ಛತ್ತೀಸ್ ಗಡದ ಮುಖ್ಯಮಂತ್ರಿಯಾಗಿರುವ ಹಾಗೂ 10 ವರ್ಷಗಳಿಂದಲೂ ರಾಜ್ ನಂದ್ಗಾನ್   ಶಾಸಕರಾಗಿರುವ  ಡಾ. ರಣಮ್ ಸಿಂಗ್,  ಜನರ ಒಳಿತಿಗಾಗಿ ಏನೂ ಮಾಡಿಲ್ಲ.  ಅದಕ್ಕಾಗಿ ಜನರ ಒಳಿತಿಗಾಗಿ ಹೋರಾಡುವಂತೆ ತಮ್ಮನ್ನು ಕಾಂಗ್ರೆಸ್ ಅಧ್ಯಕ್ಷರು ಕಳುಹಿಸಿರುವುದಾಗಿ  ಕರುಣ ಶುಕ್ಲಾ ತಿಳಿಸಿದ್ದಾರೆ.

ನವೆಂಬರ್ 12 ರಂದು ಛತ್ತೀಸ್ ಗಡ ವಿಧಾನಸಭೆಯ ಮೊದಲ ಹಂತದ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT