ಜಮ್ಮು-ಕಾಶ್ಮೀರ: ಶಾಲಾ ಕಾಲೇಜುಗಳಲ್ಲಿ ರಾಮಾಯಣ ಭಗವದ್ಗೀತೆಗೆ ಸಂಬಂಧಿಸಿದ ಸುತ್ತೋಲೆ ವಾಪಸ್ 
ದೇಶ

ಜಮ್ಮು-ಕಾಶ್ಮೀರ: ಶಾಲಾ ಕಾಲೇಜುಗಳಲ್ಲಿ ರಾಮಾಯಣ ಭಗವದ್ಗೀತೆಗೆ ಸಂಬಂಧಿಸಿದ ಸುತ್ತೋಲೆ ವಾಪಸ್

ರಾಮಾಯಣ, ಭಗವದ್ಗೀತೆಗಳ ಉರ್ದು ಆವೃತ್ತಿಯ ಪುಸ್ತಕಗಳನ್ನು ಪಡೆಯುವಂತೆ ಶಾಲಾ ಕಾಲೇಜುಗಳಿಗೆ ಕಳಿಸಲಾಗಿದ್ದ ಸುತ್ತೋಲೆಗಳನ್ನು ಜಮ್ಮು-ಕಾಶ್ಮೀರ ಸರ್ಕಾರ ವಾಪಸ್ ಪಡೆದಿದೆ.

ಜಮ್ಮು-ಕಾಶ್ಮೀರ: ರಾಮಾಯಣ, ಭಗವದ್ಗೀತೆಗಳ ಉರ್ದು ಆವೃತ್ತಿಯ ಪುಸ್ತಕಗಳನ್ನು ಪಡೆಯುವಂತೆ ಶಾಲಾ ಕಾಲೇಜುಗಳಿಗೆ ಕಳಿಸಲಾಗಿದ್ದ ಸುತ್ತೋಲೆಗಳನ್ನು ಜಮ್ಮು-ಕಾಶ್ಮೀರ ಸರ್ಕಾರ ವಾಪಸ್ ಪಡೆದಿದೆ. 
ರಾಜ್ಯದ ಮುಖ್ಯ ಕಾರ್ಯದರ್ಶಿಯ ಆದೇಶದ ಮೇರೆಗೆ ಶಾಲಾ ಕಾಲೇಜುಗಳಲ್ಲಿ ನಿರ್ದಿಷ್ಟ ಧಾರ್ಮಿಕ ಪುಸ್ತಕಗಳನ್ನು ಪರಿಚಯಿಸಲು ಸೂಚಿಸಲಾಗಿದ್ದ ಸುತ್ತೋಲೆಯನ್ನು ವಾಪಸ್ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.  ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಶಾಲಾ ಕಾಲೇಜುಗಳು ಸರ್ವಾನಂದ್ ಪ್ರೇಮಿ  ಅವರು ಬರೆದಿರುವ ರಾಮಾಯಣ ಹಾಗೂ ಭಗವದ್ಗೀತೆಯ ಧಾರ್ಮಿಕ ಪುಸ್ತಕಗಳನ್ನು ಖರೀದಿಸುವಂತೆ ಅ.22 ರಂದು ಜಮ್ಮು-ಕಾಶ್ಮೀರದ ಸರ್ಕಾರ ಆದೇಶ ಹೊರಡಿಸಿತ್ತು.  
ಸುತ್ತೋಲೆಗೆ ವಿರೋಧ ವ್ಯಕ್ತಪಡಿಸಿದ್ದ ರಾಜಕೀಯ ನಾಯಕ ಓಮರ್ ಅಬ್ದುಲ್ಲಾ, ಬೇರೆ ಧಾರ್ಮಿಕ ಪುಸ್ತಕಗಳನ್ನು ನಿರ್ಲಕ್ಷಿಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT