ಪಿಣರಾಯ್ ವಿಜಯನ್, 
ದೇಶ

ಶಬರಿಮಲೆ ಹಿಂಸಾತ್ಮಕ ಪ್ರತಿಭಟನೆ: ಬಿಜೆಪಿ, ಆರ್ ಎಸ್ಎಸ್ ವಿರುದ್ಧ ಕೇರಳ ಸಿಎಂ ಆಕ್ರೋಶ

ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ನಡೆದ ಹಿಂಸಾತ್ಮಕ...

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ನಡೆದ ಹಿಂಸಾತ್ಮಕ ಪ್ರತಿಭಟನೆಗೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ಬಿಜೆಪಿ ಮತ್ತು ಆರ್ ಎಸ್ ಎಸ್ ವಿರುದ್ಧ ಮಂಗಳವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಮತ್ತು ಆರ್ ಎಸ್ಎಸ್ ಕಾರ್ಯಕರ್ತರು ರಾಜ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಸುವ ಉದ್ದೇಶದಿಂದಲೇ ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದಾರೆ ಎಂದು ಸಿಎಂ ಆರೋಪಿಸಿದ್ದಾರೆ.
ಮಾಧ್ಯಮದವರ ಮತ್ತು ಮಹಿಳೆಯರ ಮೇಲಿನ ದಾಳಿಗೆ ಆರ್ ಎಸ್ ಎಸ್ ಪಿತೂರಿಯೇ ಕಾರಣ ಎಂದು ಪಿಣರಾಯ್ ವಿಜಯನ್ ದೂರಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪನ್ನು ಜಾರಿಗೊಳಿಸುವುದು ರಾಜ್ಯ ಸರ್ಕಾರದ ಸಾಂವಿಧಾನಿಕ ಜವಾಬ್ದಾರಿಯಾಗಿದೆ. ಪುಣ್ಯ ಕ್ಷೇತ್ರವನ್ನು ರಣರಂಗವಾಗಿಸಲು ಅವಕಾಶ ನೀಡುವುದಿಲ್ಲ ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.
ಮಾಸಿಕ ಪೂಜೆ ನಿಮಿತ್ತ ಅಕ್ಟೋಬರ್ 17ರಿಂದ 22ರ ವರೆಗೆ ಅಯ್ಯಪ್ಪಸ್ವಾಮಿ ದೇವಾಲಯ ತೆರೆಯಲಾಗಿತ್ತು. ಈ ಅವಧಿಯಲ್ಲಿ ದೇವರ ದರ್ಶನಕ್ಕೆ 6 ಮಹಿಳೆಯರು ಯತ್ನಸಿದರೂ ಅವರನ್ನು ತಡೆಯಲಾಯಿತು. ಕಳೆದ 5 ದಿನಗಳಿಂದ ನಡೆದ ಹೈಡ್ರಾಮಾ, ಪ್ರತಿಭಟನೆಗೂ ಈಗ ತಾತ್ಕಾಲಿಕ ವಿರಾಮ ಸಿಕ್ಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT