Sabarimala row: Temple collections fall by Rs 45 lakh as devotees fill hundi with paper notes with the message ‘Save Sabarimala’ 
ದೇಶ

ಶಬರಿಮಲೆ ವಿವಾದ: ಹುಂಡಿಯಲ್ಲಿ ಶಬರಿಮಲೆ ಉಳಿಸಿ ಸಂದೇಶದ ಚೀಟಿ: 45 ಲಕ್ಷ ರೂ ನಷ್ಟ!

ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿ ನಡೆದಿದ್ದ ಪ್ರತಿಭಟನೆ ದೇವಾಲಯದ ಹುಂಡಿಗೆ ಬರುತ್ತಿದ್ದ ಆದಾಯದ ಮೇಲೆ ಪರಿಣಾಮ ಬೀರಿದೆ.

ತಿರುವನಂತಪುರಂ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿ ನಡೆದಿದ್ದ ಪ್ರತಿಭಟನೆ ದೇವಾಲಯದ ಹುಂಡಿಗೆ ಬರುತ್ತಿದ್ದ ಆದಾಯದ ಮೇಲೆ ಪರಿಣಾಮ ಬೀರಿದೆ. 
ದೇವಾಲಯದ ಹುಂಡಿಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಬರಿಮಲೆಯನ್ನು ರಕ್ಷಿಸಿ, ಸ್ವಾಮಿಯೇ ಶರಣಂ ಅಯ್ಯಪ್ಪ ಎಂಬ ಸಂದೇಶಗಳನ್ನು ಹೊಂದಿದ್ದ ಚೀಟಿಗಳನ್ನು ಹಾಕಿದ್ದರು. ಪರಿಣಾಮವಾಗಿ ದೇವಾಲಯಕ್ಕೆ ಹುಂಡಿಯಿಂದ ಬರುತ್ತಿದ್ದ ಆದಾಯ 45 ಲಕ್ಷ ರೂಪಾಯಿಯಷ್ಟು ಕುಸಿದಿದೆ. ಸುಪ್ರೀಂ ಕೋರ್ಟ್ ಆದೇಶದ ನಂತರ ಸರ್ಕಾರದ ಅಧೀನದಲ್ಲಿರುವ ಎಲ್ಲಾ ದೇವಾಲಯಗಳಲ್ಲಿಯೂ ಯಾವ ಹಿಂದೂವೂ ಹುಂಡಿಗಳಿಗೆ ಹಣ ಹಾಕಬಾರದೆಂಬ ಚಳುವಳಿಯನ್ನು ಪ್ರಾರಂಭಿಸಲಾಗಿತ್ತು. 
2017 ಕ್ಕೆ ಹೋಲಿಸಿದಾಗ ದೇವಾಲಯದ ಮೊದಲೆರಡು ದಿನಗಳ ಆದಾಯದಲ್ಲಿ  ಈ ವರ್ಷ 44.5 ಲಕ್ಷ ರೂಪಾಯಿಯಷ್ಟು ಕಡಿಮೆಯಾಗಿದ್ದು  ಕಳೆದ ವರ್ಷ ಮೊದಲ ದಿನವೇ 8.42 ಲಕ್ಷ ರೂಪಾಯಿ ಹುಂಡಿಯಲ್ಲಿ ಸಂಗ್ರಹವಾಗಿತ್ತು, ಆದರೆ ಈ ವರ್ಷ 4.83 ಲಕ್ಷ ರೂಪಾಯಿಯಷ್ಟಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT