Sabarimala row: Temple collections fall by Rs 45 lakh as devotees fill hundi with paper notes with the message ‘Save Sabarimala’ 
ದೇಶ

ಶಬರಿಮಲೆ ವಿವಾದ: ಹುಂಡಿಯಲ್ಲಿ ಶಬರಿಮಲೆ ಉಳಿಸಿ ಸಂದೇಶದ ಚೀಟಿ: 45 ಲಕ್ಷ ರೂ ನಷ್ಟ!

ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿ ನಡೆದಿದ್ದ ಪ್ರತಿಭಟನೆ ದೇವಾಲಯದ ಹುಂಡಿಗೆ ಬರುತ್ತಿದ್ದ ಆದಾಯದ ಮೇಲೆ ಪರಿಣಾಮ ಬೀರಿದೆ.

ತಿರುವನಂತಪುರಂ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿ ನಡೆದಿದ್ದ ಪ್ರತಿಭಟನೆ ದೇವಾಲಯದ ಹುಂಡಿಗೆ ಬರುತ್ತಿದ್ದ ಆದಾಯದ ಮೇಲೆ ಪರಿಣಾಮ ಬೀರಿದೆ. 
ದೇವಾಲಯದ ಹುಂಡಿಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಬರಿಮಲೆಯನ್ನು ರಕ್ಷಿಸಿ, ಸ್ವಾಮಿಯೇ ಶರಣಂ ಅಯ್ಯಪ್ಪ ಎಂಬ ಸಂದೇಶಗಳನ್ನು ಹೊಂದಿದ್ದ ಚೀಟಿಗಳನ್ನು ಹಾಕಿದ್ದರು. ಪರಿಣಾಮವಾಗಿ ದೇವಾಲಯಕ್ಕೆ ಹುಂಡಿಯಿಂದ ಬರುತ್ತಿದ್ದ ಆದಾಯ 45 ಲಕ್ಷ ರೂಪಾಯಿಯಷ್ಟು ಕುಸಿದಿದೆ. ಸುಪ್ರೀಂ ಕೋರ್ಟ್ ಆದೇಶದ ನಂತರ ಸರ್ಕಾರದ ಅಧೀನದಲ್ಲಿರುವ ಎಲ್ಲಾ ದೇವಾಲಯಗಳಲ್ಲಿಯೂ ಯಾವ ಹಿಂದೂವೂ ಹುಂಡಿಗಳಿಗೆ ಹಣ ಹಾಕಬಾರದೆಂಬ ಚಳುವಳಿಯನ್ನು ಪ್ರಾರಂಭಿಸಲಾಗಿತ್ತು. 
2017 ಕ್ಕೆ ಹೋಲಿಸಿದಾಗ ದೇವಾಲಯದ ಮೊದಲೆರಡು ದಿನಗಳ ಆದಾಯದಲ್ಲಿ  ಈ ವರ್ಷ 44.5 ಲಕ್ಷ ರೂಪಾಯಿಯಷ್ಟು ಕಡಿಮೆಯಾಗಿದ್ದು  ಕಳೆದ ವರ್ಷ ಮೊದಲ ದಿನವೇ 8.42 ಲಕ್ಷ ರೂಪಾಯಿ ಹುಂಡಿಯಲ್ಲಿ ಸಂಗ್ರಹವಾಗಿತ್ತು, ಆದರೆ ಈ ವರ್ಷ 4.83 ಲಕ್ಷ ರೂಪಾಯಿಯಷ್ಟಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT