ವಿಜಯ್ ಶೇಖರ್ ಶರ್ಮಾ 
ದೇಶ

ಪೇಟಿಎಂ ಬಾಸ್ ನಿಂದಲೇ ಹಣ ಪೀಕಲು ಯತ್ನಿಸಿದ ಸಂಸ್ಥೆಯ ಸೆಕ್ರೆಟರಿ ಸೇರಿ ಮೂವರು ಉದ್ಯೋಗಿಗಳ ಬಂಧನ!

ಇ-ವಾಲೆಟ್ ದೈತ್ಯ ಪೇಟಿಎಂ ನ ಸ್ಥಾಪಕ ವಿಜಯ್ ಶೇಖರ್ ಶರ್ಮಾ ಅವರಿಂದ 20 ಕೋಟಿ ಹಣ ಪೀಕಲು ಯತ್ನಿಸಿದ್ದ ಅರೋಪದ ಅಡಿ ಪೇಟಿಎಂ ನ 3 ಉದ್ಯೋಗಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇ-ವಾಲೆಟ್ ದೈತ್ಯ ಪೇಟಿಎಂ ನ ಸ್ಥಾಪಕ ವಿಜಯ್ ಶೇಖರ್ ಶರ್ಮಾ ಅವರಿಂದ 20 ಕೋಟಿ ಹಣ ಪೀಕಲು ಯತ್ನಿಸಿದ್ದ ಅರೋಪದ ಅಡಿ ಪೇಟಿಎಂ ನ 3 ಉದ್ಯೋಗಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಂಸ್ಥೆ ಸಂಗ್ರಹಿಸಿಟ್ಟಿದ್ದ ಖಾಸಗಿ ಮಾಹಿತಿಗಳನ್ನು ಕದ್ದು ಅದನ್ನು ಸೋರಿಕೆ ಮಾಡುವುದಾಗಿ ಪೇಟಿಎಂ ನ ಕಾರ್ಯದರ್ಶಿ ಸೇರಿದಂತೆ ಮೂವರು ಉದ್ಯೋಗಿಗಳು ಸಂಸ್ಥೆಯ ಸ್ಥಾಪಕ ವಿಜಯ್ ಶೇಖರ್ ಶರ್ಮಾಗೆ ಬೆದರಿಕೆ ಹಾಕುತ್ತಿದ್ದರು ಎಂದು ಕಾರ್ಯಾಚರಣೆ ನಡೆಸಿರುವ ನೋಯ್ಡಾ ಪೊಲೀಸರು ಹೇಳಿದ್ದಾರೆ. 
ಈ ಬೆದರಿಕೆ ಷಡ್ಯಂತ್ರದಲ್ಲಿ ವಿಜಯ್ ಶೇಖರ್ ಶರ್ಮಾ ಅವರ ಕಾರ್ಯದರ್ಶಿ ಆಕೆಯ ಪತಿ, ಸಂಸ್ಥೆಯ ಮತ್ತೋರ್ವ ಉದ್ಯೋಗಿ ದೇವೇಂದ್ರ ಕುಮಾರ್ ಹಾಗೂ ಸಂಸ್ಥೆಯ ಕೋಲ್ಕತ್ತಾ ವಿಭಾಗದ ಉದ್ಯೋಗಿಯಾಗಿರುವ ರೋಹಿತ್ ಚೋಮಲ್ ಎಂಬುವವರು ಭಾಗಿಯಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 
ತಮಗೆ ಬೆದರಿಕೆ ಬರುತ್ತಿರುವುದರ ಬಗ್ಗೆ ವಿಜಯ್ ಶೇಖರ್ ಶರ್ಮಾ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿ ಬಂಧಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT