'ಬುಕ್ ಯುವರ್ ಟಿಕೆಟ್' ಎಂದು ಐಆರ್ ಸಿಟಿಸಿ ವೆಬ್ ಸೈಟ್ ನಲ್ಲಿ ಇನ್ನು ಮುಂದೆ ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ನಿಲ್ದಾಣದ ಹೆಸರು 
ದೇಶ

ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಇಂಗ್ಲಿಷ್ ವೆಬ್ ಸೈಟ್ ನಿಂದ ಹಿಂದಿ ಭಾಷಾ ಆಯ್ಕೆ ತೆಗೆದುಹಾಕಿದ ರೈಲ್ವೆ ಇಲಾಖೆ

ತಮಿಳುನಾಡು ಸೇರಿದಂತೆ ದೇಶದ ಇತರ ಭಾಗಗಳಲ್ಲಿ ರೈಲ್ವೆ ಪ್ರಯಾಣಿಕರ ವರ್ಗವೊಂದು ತೀವ್ರ ವಿರೋಧ ...

ಚೆನ್ನೈ: ತಮಿಳುನಾಡು ಸೇರಿದಂತೆ ದೇಶದ ಇತರ ಭಾಗಗಳಲ್ಲಿ ರೈಲ್ವೆ ಪ್ರಯಾಣಿಕರ ವರ್ಗವೊಂದು ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ರೈಲ್ವೆ ಇಲಾಖೆ ಐಆರ್ ಸಿಟಿಸಿ ಆನ್ ಲೈನ್ ಟಿಕೆಟ್ ಕಾಯ್ದಿರಿಸುವ ಇಂಗ್ಲಿಷ್ ವೆಬ್ ಸೈಟ್ ನಿಂದ ಹಿಂದಿ ಭಾಷೆಯನ್ನು ತೆಗೆದುಹಾಕಿದೆ.

ಕೇಂದ್ರ ರೈಲ್ವೆ ಮಾಹಿತಿ ವ್ಯವಸ್ಥೆಯ(ಸಿಆರ್ ಐಎಸ್) ನ ಅಧಿಕೃತ ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ರೈಲ್ವೆಯ ಮಾಹಿತಿ ತಂತ್ರಜ್ಞಾನ ವಿಭಾಗ ಇಂಗ್ಲಿಷ್ ವೆಬ್ ಸೈಟ್ ನಲ್ಲಿ ಹಿಂದಿ ಭಾಷೆಯಲ್ಲಿ ರೈಲ್ವೆ ನಿಲ್ದಾಣದ ಹೆಸರು ಮತ್ತು ಇತರ ಸಾಮಾನ್ಯ ಸೂಚನೆಗಳನ್ನು irctc.co.in ನಿಂದ ತೆಗೆದುಹಾಕಲಾಗಿದೆ.

ಅಂತರ್ಜಾಲದ ಮುಖಪುಟದಲ್ಲಿ ಬುಕ್ ಯುವರ್ ಟಿಕೆಟ್ ಕೆಳಗೆ ಇನ್ನು ಮುಂದೆ ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ನಿಲ್ದಾಣಗಳ ಹೆಸರು ಕಾಣುತ್ತವೆ. ಉಳಿದಂತೆ ಐಆರ್ ಸಿಟಿಸಿಯ ವೆಬ್ ಸೈಟ್ ನಲ್ಲಿ ಹಿಂದಿ ಭಾಷೆಯಲ್ಲಿ ಬೇರೆಲ್ಲಾ ಮಾಹಿತಿಗಳು ಮೊದಲಿನಂತೆ ಸಿಗುತ್ತವೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಟಿಕೆಟ್ ಬುಕ್ ಮಾಡುವ ಮುನ್ನ ಮತ್ತು ಮಾಡಿದ ನಂತರ ಸಾಮಾನ್ಯ ಸಲಹೆಗಳು ಮತ್ತು ಇತರ ಪ್ರಚಾರ ಸಂದೇಶಗಳು ಮುಖಪುಟದಲ್ಲಿ ಇನ್ನು ಮುಂದೆ ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಇರುತ್ತದೆ. ಕಳೆದ ಮೇಯಲ್ಲಿ ಸಿಆರ್ ಐಎಸ್ ನ್ನು ಮೇಲ್ದರ್ಜೆಗೇರಿಸಲಾಗಿತ್ತು. ಐಆರ್ ಸಿಟಿಸಿ ವೆಬ್ ಸೈಟ್ ತ್ವರಿತವಾಗಿ ಕೆಲಸ ಮಾಡಿ ಪ್ರಯಾಣಿಕರಿಗೆ ಟಿಕೆಟ್ ಕಾಯ್ದಿರಿಸಲು ಅನುಕೂಲ ಕಲ್ಪಿಸಿಕೊಡಲಾಗಿತ್ತು.

ಇಂಗ್ಲಿಷ್ ವೆಬ್ ಸೈಟ್ ನಲ್ಲಿ ಹಿಂದಿ ಭಾಷೆ ಹೇರಿಕೆ ತಮಿಳು ನಾಡು ಸೇರಿದಂತೆ ಹಿಂದಿಯೇತರ ಭಾಷೆ ಮಾತನಾಡುವ ರಾಜ್ಯಗಳ ಜನತೆಗೆ ತೀವ್ರ ಅಸಮಾಧಾನವನ್ನುಂಟುಮಾಡುತ್ತಿತ್ತು. ಇತ್ತೀಚೆಗೆ ರೈಲ್ವೆ ಇಲಾಖೆ ಕಾಯ್ದಿರಿಸದ ಟಿಕೆಟ್ ನಲ್ಲಿ ತಮಿಳು ಮತ್ತು ಮಲಯಾಳಂ ಭಾಷೆಗಳನ್ನು ಮತ್ತೆ ತಂದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT