ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗೌಬಾ 
ದೇಶ

ಸಾಮಾಜಿಕ ಮಾಧ್ಯಮ ದುರ್ಬಳಕೆ ತಡೆಯುವ ನಿಟ್ಟಿನಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ನೇತೃತ್ವದಲ್ಲಿ ಸಭೆ

ಸಾಮಾಜಿಕ ಜಾಲತಾಣಗಳ ದುರ್ಬಳಕೆ ತಡೆಯುವ ನಿಟ್ಟಿನಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗೌಬಾ ನೇತೃತ್ವದಲ್ಲಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರೊಂದಿಗೆ ಇಂದು ಸಭೆ ನಡೆಸಲಾಯಿತು.

ನವದೆಹಲಿ:ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ರಾಷ್ಟ್ರೀಯ ಹಿತಾಸಕ್ತಿಗೆ ಮಾರಕವಾಗುವ ರೀತಿಯಲ್ಲಿ  ಸಾಮಾಜಿಕ ಜಾಲತಾಣಗಳ ದುರ್ಬಳಕೆ ತಡೆಯುವ ನಿಟ್ಟಿನಲ್ಲಿ   ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗೌಬಾ ನೇತೃತ್ವದಲ್ಲಿ  ಫೇಸ್ ಬುಕ್, ಗೂಗಲ್, ಟ್ವಿಟರ್, ವಾಟ್ಸಪ್ ಮತ್ತಿತರ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರೊಂದಿಗೆ ಇಂದು  ಸಭೆ ನಡೆಸಲಾಯಿತು.

ದುರುದ್ದೇಶ ಪೂರಿತ ಹಾಗೂ ಆಕ್ಷೇಪಾರ್ಹ ಅಂಶಗಳನ್ನು  ಸಾರ್ವಜನಿಕರು ವೀಕ್ಷಿಸದಂತೆ  ವೆಬ್ ಸೈಟ್ ನಿಂದ ತೆಗೆದುಹಾಕಲು ಕ್ರಮ ಕೈಗೊಳ್ಳಬೇಕೆಂದು  ಸರ್ಕಾರದ ಪರ ಪಾಲ್ಗೊಂಡಿದ್ದ ಪ್ರತಿನಿಧಿಗಳು ಸಾಮಾಜಿಕ ಮಾಧ್ಯಮಗಳ ಪ್ರತಿನಿಧಿಗಳಿಗೆ ಸೂಚನೆ ನೀಡಿದರು.

ದೇಶದ ಭದ್ರತೆಗೆ ಹಾನಿಯಾಗುವಂತಹ ಚಟುವಟಿಕೆಗಳಿಗೆ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಳ್ಳದಂತೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದು  ಕೇಂದ್ರ ಗೃಹ ಕಾರ್ಯದರ್ಶಿ ತಿಳಿಸಿದರು.

ನಿಗದಿತ ಸಮಯದಲ್ಲಿ  ಆಕ್ಷೇಪಾರ್ಹ ಅಂಶಗಳನ್ನು ತೆಗೆದುಹಾಕಲು ಹಾಗೂ ತನಿಖೆ ಸಂದರ್ಭದಲ್ಲಿ ಸಂಬಂಧಿತ ಸಂಸ್ಥೆಗಳಿಗೆ ಮಾಹಿತಿ ನೀಡಲು ಭಾರತ ಮೂಲಕ ಕುಂದು ಕೊರತೆಗಳ ನಿವಾರಣಾಧಿಕಾರಿಗಳನ್ನು ಸಾಮಾಜಿಕ ಮಾಧ್ಯಮಗಳ ಪ್ರತಿನಿಧಿಗಳೇ ನೇಮಿಸುವಂತೆ ಅವರು ಹೇಳಿದರು.

ಈ ಸಂಬಂಧ ಎಲ್ಲಾ ರೀತಿಯ ನೆರವು ನೀಡುವುದಾಗಿ ಎಲ್ಲಾ ಸಾಮಾಜಿಕ ಮಾಧ್ಯಮಗಳ ಪ್ರತಿನಿಧಿಗಳು ಸರ್ಕಾರಕ್ಕೆ ಭರವಸೆ ನೀಡಿದರು.

ಈ ಹಿಂದೆ ಜೂನ್ 28 ರಂದು, ಕೇಂದ್ರ ಗೃಹ ಕಾರ್ಯದರ್ಶಿ ಸಾಮಾಜಿಕ ಮಾಧ್ಯಮಗಳ ಪ್ರತಿನಿಧಿಗಳೊಂದಿಗೆ ಪರಾಮರ್ಶನಾ ಸಭೆ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ಮಸ್ಕತ್‌ನಲ್ಲಿ ಡ್ರೋನ್ ದಾಳಿ, ಭಾರತ ಮೂಲದ ಇಬ್ಬರ ಸಾವು

Khamenei ಸತ್ತ... ಉತ್ತರಾಧಿಕಾರಿ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಇದು ಇರಾನ್ ಗೇ ಗೊತ್ತಿಲ್ಲ!

'ನನ್ನ ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಬೇಡಿ'.. 'ಉತ್ತರಿಸದಿದ್ದ ಮೇಲೆ ಅಧಿವೇಶನ ಏಕೆ ಕರೆಯಬೇಕು': ಸ್ಪೀಕರ್ UT Khader ಕಿಡಿ

ಹಾರ್ಮುಜ್ ಜಲಸಂಧಿ ಬಂದ್ ಮಾಡಿಲ್ಲ; ವಿಶ್ವ ನಾಯಕರು ಯುದ್ಧ ನಿಲ್ಲಿಸಲು ಅಮೆರಿಕ ಮೇಲೆ ಒತ್ತಡ ಹೇರಬೇಕು: ಇರಾನ್

ನಟಿ ಜೊತೆ ಅಕ್ರಮ ಸಂಬಂಧ: ತಂದೆ ವಿಜಯ್ ಹೆಸರನ್ನು ಕೈಬಿಟ್ಟು ತಾಯಿಯ ಬೆಂಬಲಕ್ಕೆ ನಿಂತ ಜೇಸನ್!

SCROLL FOR NEXT