ಅಧಿಕಾರಿಗಳನ್ನು ಬಂಧನಕ್ಕೊಳಪಡಿಸುತ್ತಿರುವ ಅಲೋಕ್ ವರ್ಮಾ ಭದ್ರತಾ ಸಿಬ್ಬಂದಿಗಳು 
ದೇಶ

ಅಲೋಕ್ ವರ್ಮಾ ಮನೆಯ ಹೊರಗಡೆ ಇದ್ದವರು ನಮ್ಮ ಅಧಿಕಾರಿಗಳು, ಗೂಢಾಚಾರಿಕೆ ಮಾಡುತ್ತಿರಲಿಲ್ಲ: ಐಬಿ

ಕಡ್ಡಾಯ ರಜೆಯಲ್ಲಿರುವ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರ ನಿವಾಸದ ಮುಂದೆ ಇದ್ದವರು ನಮ್ಮ ಅಧಿಕಾರಿಗಳೇ, ಅವರು ಗೂಢಾಚಾರಿಕೆ ಮಾಡುತ್ತಿರಲಿಲ್ಲ ಗುಪ್ತಚರ ದಳ (ಐಬಿ)...

ನವದೆಹಲಿ: ಕಡ್ಡಾಯ ರಜೆಯಲ್ಲಿರುವ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರ ನಿವಾಸದ ಮುಂದೆ ಇದ್ದವರು ನಮ್ಮ ಅಧಿಕಾರಿಗಳೇ, ಅವರು ಗೂಢಾಚಾರಿಕೆ ಮಾಡುತ್ತಿರಲಿಲ್ಲ ಗುಪ್ತಚರ ದಳ (ಐಬಿ)ದ ಅಧಿಕಾರಿಗಳು ಗುರುವಾರ ಹೇಳಿದ್ದಾರೆ. 
ಸಾರ್ವಜನಿಕ ಮತ್ತು ಆಂತರಿಕ ಭದ್ರತೆಗಳ ಮೇಲೆ ಪರಿಣಾಮ ಬೀರುವ ಯಾವುದೇ ಪರಿಸ್ಥಿತಿಗಳ ಕುರಿತಂತೆ ಮಾಹಿತಿಗಳನ್ನು ಕಲೆಹಾಕುವ ಜವಾಬ್ದಾರಿಯನ್ನು ಗುಪ್ತಚರ ಇಲಾಖೆ ನಾಲ್ವರು ಅಧಿಕಾರಿಗಳಿಗೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಈ ನಾಲ್ವರು ಅಧಿಕಾರಿಗಳು ಅಲೋಕ್ ವರ್ಮಾ ಅವರ ನಿವಾಸದ ಮುಂದೆ ಬೀಡುಬಿಟ್ಟಿದ್ದರು ಎಂದು ಗುಪ್ತಚರ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. 
ಇದಲ್ಲದೆ, ಸಾಮಾನ್ಯವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಗುಪ್ತಚರ ಇಲಾಖೆಯ ಅಧಿಕಾರಿಗಳು ಮಾಹಿತಿಗಳನ್ನು ಕಲೆ ಹಾಕಲು ನಿಯೋಜಿಸಲಾಗಿರುತ್ತದೆ. ಕೆಲವೊಮ್ಮೆ ಸ್ಥಳೀಯ ಜಾರಿ ಸಂಸ್ಥೆಗಳೊಂದಿಗೆ ಸೇರಿಕೊಂಡು ಇಂತಹ ಕಾರ್ಯಗಳನ್ನು ಮಾಡಲಾಗುತ್ತಿರುತ್ತದೆ. ಕೆಲವೊಮ್ಮೆ ಆಶ್ಚರ್ಯಕರ ಸನ್ನಿವೇಶಗಳು ಸಹ ಸಂಭವಿಸುತ್ತವೆ. ಇಂತಹ ಸಂದರ್ಭದಲ್ಲಿ ಸ್ಥಳೀಯ ಜಾರಿ ಸಂಸ್ಥೆಗಳೂ ಕೂಡಲೇ ಪ್ರತಿಕ್ರಿಯೆಗಳನ್ನು ನೀಡುತ್ತವೆ. 
ಇಂತಹ ಕಾರ್ಯಾಚರಣೆ ಹಾಗೂ ಕರ್ತವ್ಯ ನಿಭಾಯಿಸುವ ಅಧಿಕಾರಿಗಳು ಗುರುತಿನ ಚೀಟಿಯನ್ನು ಹೊಂದಿರುತ್ತಾರೆ. ಇಂತಹ ಕಾರ್ಯಾಚರಣೆಗಳು ರಹಸ್ಯವಾಗಿರಲಿದ್ದು, ಗೌಪ್ಯವಾಗಿ ನಡೆಸಲಾಗುತ್ತಿರುತ್ತದೆ ಎಂದು ಐಬಿ ಅಧಿಕಾರಿಗಳು ತಿಳಿಸಿದ್ದಾರೆ. 
ಇಂದು ಬೆಳಿಗ್ಗೆಯಷ್ಟೇ ಅಲೋಕ್ ವರ್ಮಾ ಅವರ ನಿವಾಸದ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದಾರೆಂದು ಶಂಕಿಸಿ ನಾಲ್ವರನ್ನು ಅಲೋಕ್ ಅವರ ಭದ್ರತಾ ಸಿಬ್ಬಂದಿಗಳು ಬಂಧನಕ್ಕೊಳಪಡಿಸಿದ್ದರು.
ಅಲೋಕ್ ವರ್ಮಾ ನಂತರದ ಹಿರಿಯ ಅಧಿಕಾರಿಯಾಗಿರುವ ವಿಶೇಷ ನಿರ್ದೇಶಕ ರಾಕೇಶ್ ಅಸ್ಥಾನಾ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಿಬಿಐ ಇದೇ 15 ರಂದು ಎಫ್ಐಆರ್ ದಾಖಲಿಸಿತ್ತು. ಬಳಿಕ ಅಸ್ಥಾನಾ ಮತ್ತು ಅಲೋಕ್ ವರ್ಮಾ ಅವರ ನಡುವೆ ಶೀತರ ಸಮರ ಬಯಲಾಗಿತ್ತು. ಇಬ್ಬರೂ ಪರಸ್ಪರರ ವಿರುದ್ಧ ಆರೋಪ ಮಾಡಿಕೊಂಡು ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂತೆ ಮಾಡಿದ್ದರು. 
ಈ ಒಳಜಗಳವನ್ನು ಸರಿಪಡಿಸುವ ಸಲುವಾಗಿ ಕೇಂದ್ರ ಸರ್ಕಾರ ಮಧ್ಯೆಪ್ರವೇಶಿಸಿ ಅಲೋಕ್ ವರ್ಮಾ ಹಾಗೂ ಅಸ್ಥಾನಾ ಅವರಿಗೆ ಕಡ್ಡಾಯ ರಜೆ ಮೇಲೆ ಕಳುಹಿಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT