ನೀರಾವ್ ಮೋದಿ 
ದೇಶ

ಹಾಂಗ್ ಕಾಂಗ್ ನಲ್ಲಿ ನೀರಾವ್ ಮೋದಿಗೆ ಸೇರಿದ 255 ಕೋಟಿ ರೂ. ಮೌಲ್ಯದ ಸಂಪತ್ತು ಇಡಿ ವಶಕ್ಕೆ!

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಹಾಂಗ್ ಕಾಂಗ್ ನಲ್ಲಿ ನಿರಾವ್ ಮೋದಿಗೆ ಸೇರಿದ 255 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗುವುದು ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಹಾಂಗ್ ಕಾಂಗ್ ನಲ್ಲಿ ನೀರಾವ್  ಮೋದಿಗೆ ಸೇರಿದ 255 ಕೋಟಿ ರೂ. ಮೌಲ್ಯದ  ಚಿನ್ನಾಭರಣವನ್ನು  ವಶಪಡಿಸಿಕೊಳ್ಳಲಾಗುವುದು ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಈ ಸಂಪತ್ತು ವಶಪಡಿಸಿಕೊಳ್ಳಲು ತಾತ್ಕಾಲಿಕ ಆದೇಶವನ್ನು ಹೊರಡಿಸಲಾಗಿದೆ ಎಂದು ಇಡಿ ತಿಳಿಸಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದಲ್ಲಿ ಕೇಸ್ ದಾಖಲಾದ ನಂತರ ದುಬೈ ಮೂಲದ  ಕಂಪನಿಯೊಂದರ ಮೂಲಕ  ಭಾರೀ ಮೌಲ್ಯದ ಚಿನ್ನಾಭರಣವನ್ನು  ಹಾಂಗ್ ಕಾಂಗ್ ಗೆ ರಪ್ತು ಮಾಡಲಾಗಿತ್ತು.

 ವಿಚಾರಣೆ ವೇಳೆಯಲ್ಲಿ ಚಿನ್ನಾಭರಣ ಸಾಗಿಸಲಾದ ಹಡಗು, ಹಡಗುಗಳ ಮಾಲೀಕರು, ಹಾಗೂ ಒಟ್ಟಾರೇ ಚಿನ್ನಾಭರಣಗಳ ಮೌಲ್ಯ  ಬಗ್ಗೆ ಮಾಹಿತಿ ಪಡೆದ ನಂತರ 34.97 ಮಿಲಿಯನ್ ಅಮೆರಿಕನ್ ಡಾಲರ್ ಮೊತ್ತದ  ಸಂಪತ್ತನ್ನು  ವಶಕ್ಕೆ ಪಡೆದುಕೊಳ್ಳಲಾಗುತ್ತಿದೆ ಎಂದು ಇಡಿ ತಿಳಿಸಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಈ ಸಂಪತ್ತು ವಶಪಡಿಸಿಕೊಳ್ಳಲು  ನ್ಯಾಯಾಲಯ ಅಧಿಕೃತವಾಗಿ ಹೊರಡಿಸಿರುವ ಆದೇಶದ ಪ್ರತಿಯನ್ನು ಶೀಘ್ರದಲ್ಲಿಯೇ ಹಾಂಗ್ ಕಾಂಗ್ ಗೆ ರವಾನಿಸಲಾಗುವುದು ಎಂದು ಜಾರಿನಿರ್ದೇಶನಾಲಯ ಹೇಳಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಸಾವಿರಾರು ಕೋಟಿ ರೂ. ವಂಚಿಸಿ ಕಳೆದ ವರ್ಷದಿಂದ  ಇಂಗ್ಲೆಂಡ್ ನಲ್ಲಿ ತಲೆ ಮರೆಸಿಕೊಂಡಿರುವ ನೀರವ್ ಮೋದಿ  ಬಂಧನಕ್ಕಾಗಿ ಇಂಟರ್ ಪೋಲ್  ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT