ರಾಹುಲ್ ಗಾಂಧಿ 
ದೇಶ

ಸಿಬಿಐ ನಿರ್ದೇಶಕರ ಬದಲಾವಣೆ ಸಂವಿಧಾನಕ್ಕೆ ಎಸಗಿದ ಅಪಚಾರ: ರಾಹುಲ್ ಗಾಂಧಿ

"ಮಧ್ಯರಾತ್ರಿ 2 ಗಂಟೆಗೆ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಬದಲಿಸಿರುವುದು ಸಂವಿಧಾನಕ್ಕೆ ಎಸಗಿದ ಅಪಚಾರ, ಮುಖ್ಯ ನ್ಯಾಯಾಧೀಶರಿಗೆ ಮಾಡಿದ ಅವಮಾನ ಹಾಗೂ....

ನವದೆಹಲಿ: "ಮಧ್ಯರಾತ್ರಿ 2 ಗಂಟೆಗೆ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಬದಲಿಸಿರುವುದು ಸಂವಿಧಾನಕ್ಕೆ ಎಸಗಿದ ಅಪಚಾರ, ಮುಖ್ಯ ನ್ಯಾಯಾಧೀಶರಿಗೆ ಮಾಡಿದ ಅವಮಾನ ಹಾಗೂ ದೇಶದ ಜನತೆಗೆ ಮಾಡಿದ ದ್ರೋಹವಾಗಿದೆ." ರಾಹುಲ್ ಗಾಂಧಿ ಹೇಳಿದ್ದಾರೆ.
ಕೇಂದ್ರೀಯ ತನಿಖಾ ದಳ (ಸಿಬಿಐ) ಯಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಸಂಬಂಧಿಸಿದಂತೆ ಮಾದ್ಯಮಗಳೊಡನೆ ರಾಹುಲ್ ಮಾತನಾಡಿದ್ದಾರೆ. 
ಸಿಬಿಐ ನಿರ್ದೇಶಕರನ್ನು ನೇಮಕ ಮಾಡುವುದು ಹಾಗೂ ವಜಾಗೊಳಿಸುವುವ ಕಾರ್ಯ ಪ್ರಧಾನಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ವಿರೋಧ ಪಕ್ಷದ ನಾಯಕರಿರುವ ಮೂವರ ಸಮಿತಿಯ ಕಾರ್ಯವಾಗಿದೆ.ಆದರೆ ಮೋದಿ ನೇತೃತ್ವದ ಸರ್ಕಾರ ರಾತ್ರೋರಾತ್ರಿ ಸಿಬಿಐ ನಿರ್ದೇಶಕರನ್ನು ಬದಲಿಸಿದೆ ಇದು ಕಾನೂನುಬಾಹಿರ ಕೆಲಸವಾಗಿದ್ದು ಅಪರಾಧವಾಗಿದೆ ಎಂದು ರಾಹುಲ್ ಹೇಳಿದ್ದಾರೆ.
ಅವರು ಭ್ರಷ್ಠಾಚಾರದಲ್ಲಿ ತೊಡಗಿದ್ದರು. ಅವರು ಸಿಕ್ಕಿಹಾಕಿಕೊಳ್ಳಬಹುದು ಎನ್ನುವ ಭಯದಿಂಡಲೇ ಪ್ರಧಾನಿ ರಾತ್ರಿ ಎರಡಕ್ಕೆ ಈ ಬದಲಾವಣೆ ಮಾಡಿದ್ದಾರೆ.
ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗೆ ಸಿಬಿಐನ ಆಡಳಿತವನ್ನು ನೀಡಲಾಗಿದೆ ಏಕೆ? ಅವರನ್ನು ಪ್ರಧಾನಿ ನಿಯಂತ್ರಿಸಬಹುದು, ಅಲ್ಲದೆ ಇಂತಹವರು ರಾಫೆಲ್ ಒಪ್ಪಂದದ ಕುರಿತು ಯಾವ ತನಿಖೆ ನಡೆಸುವುದಿಲ್ಲ ಎನ್ನುವುದು ಸ್ಪಷ್ಟ." ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

SCROLL FOR NEXT