ರಜನಿಕಾಂತ್ 
ದೇಶ

ರಜನಿಂಕಾತ್ 'ಸೂತ್ರದ ಬೊಂಬೆ': ಹಿರಿಯನ ನಟನ ವಿರುದ್ಧ ಡಿಎಂಕೆ ವಾಗ್ದಾಳಿ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಡಿಎಂಕೆ, ರಜನಿಂಕಾತ್ ಕೆಲವರ ಕೈಯಲ್ಲಿ...

ಚೆನ್ನೈ: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಡಿಎಂಕೆ, ರಜನಿಂಕಾತ್ ಕೆಲವರ ಕೈಯಲ್ಲಿ 'ಸೂತ್ರದ ಬೊಂಬೆ'ಯಾಗಿದ್ದು, ಕೋಮುವಾದಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದು ಆರೋಪಿಸಿದೆ.
ರಜನಿಕಾಂತ್ ಅವರು ರಾಜಕೀಯ ಪಕ್ಷ ಆರಂಭಿಸುವ ಮುನ್ನ ರಜನಿ ಮಕ್ಕಳ್ ಮಂಡ್ರಮ್(ಆರ್ ಎಂಎಂ) ಎಂಬ ವೇದಿಕೆ ಆರಂಭಿಸಿದ್ದನ್ನು ಡಿಎಂಕೆ ತನ್ನ ಮುಖವಾಣಿ ಮುರಸೋಳಿಯಲ್ಲಿ ಪ್ರಶ್ನಿಸಿದೆ.
ರಾಜಕೀಯದಲ್ಲಿ ಹಣದ ಮತ್ತು ಹುದ್ದೆಯ ಮೋಹದಲ್ಲಿ ಬದಲಾವಣೆ ತರಲು ಉತ್ತೇಜನ ನೀಡಬೇಕು ಎಂದು ತಮ್ಮ ಆರ್ ಎಂಎಂ ಸದಸ್ಯರಿಗೆ ಹೇಳಿದ್ದರು. ಅಲ್ಲದೆ ತಮ್ಮ ರಾಜಕೀಯದಲ್ಲಿ ಹಣ ಮತ್ತು ಹುದ್ದೆಗೆ ಮಹತ್ವ ನೀಡುವುದಿಲ್ಲ ಎಂದು ತಿಳಿಸಿದ್ದರು.
ರಜನಿಕಾಂತ್ ಅವರು ಮುಗ್ದ ಅಭಿಮಾನಿಗಳನ್ನು ದಾರಿ ತಪ್ಪಿಸುತ್ತಿದ್ದಾರೆ. ನಟ ರಜನಿಕಾಂತ್ ಅವರಿಗೆ ನಿಜಕ್ಕೂ ಹುದ್ದೆಯ ಮೋಹ ಇಲ್ಲದಿದ್ದರೆ ರಾಷ್ಟ್ರೀಯವಾದಿ ಇವಿ ರಾಮಸ್ವಾಮಿ ಪೆರಿಯಾರ್ ರೀತಿಯ ಚಳವಳಿ ಆರಂಭಿಸಬೇಕಿತ್ತು. ರಾಜಕೀಯ ಪಕ್ಷ ಘೋಷಿಸಿ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ 234 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದು ಏಕೆ? ಎಂದು ಡಿಎಂಕೆ ಪ್ರಶ್ನಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT