ಸಾಂದರ್ಭಿಕ ಚಿತ್ರ 
ದೇಶ

ಶಬರಿಮಲೆ ಹಿಂಸಾಚಾರ: ಕೇರಳದಾದ್ಯಂತ ಸುಮಾರು 2 ಸಾವಿರ ಪ್ರತಿಭಟನಾಕಾರರ ಬಂಧನ

ಶಬರಿಮಲೆ ಅಯ್ಯಪ್ಪ ದೇಗುಲದ ಆವರಣದಲ್ಲಿ ಹಿಂಸೆಗೆ ಪ್ರೇರೇಪಿಸಿದ 2 ಸಾವಿರಕ್ಕೂ ಹೆಚ್ಚು ...

ಶಬರಿಮಲೆ: ಶಬರಿಮಲೆ ಅಯ್ಯಪ್ಪ ದೇಗುಲದ ಆವರಣದಲ್ಲಿ ಹಿಂಸೆಗೆ ಪ್ರೇರೇಪಿಸಿದ 2 ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಮನೋರಮಾ ಪತ್ರಿಕೆ ವರದಿ ಮಾಡಿರುವ ಪ್ರಕಾರ, ಸುಮಾರು 1500 ಮಂದಿಯನ್ನು ಅದಾಗ್ಯೂ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಪ್ರತಿಭಟನಾಕಾರರ ಮೇಲೆ ಶಿಸ್ತುಕ್ರಮವಾಗಿ ಇಂದು ಮೂರನೇ ದಿನ ಕೂಡ 451 ಮಂದಿ ವಿರುದ್ಧ ಕೇಸುಗಳನ್ನು ದಾಖಲಿಸಲಾಗಿದೆ.

ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಂಕೆಯ ಆಧಾರದ ಮೇಲೆ 210 ಮಂದಿಯ ಫೋಟೋಗಳನ್ನು ಜಿಲ್ಲಾ ಪೊಲೀಸ್ ವರಿಷ್ಠರು ನೀಡಿದ್ದಾರೆ. ಮುಖ್ಯಮಂತ್ರಿ ಪಿನರಾಯಿ ವಿಜಯನ್ ನೇತೃತ್ವದಲ್ಲಿ ನಿನ್ನೆ ನಡೆದ ಉನ್ನತ ಮಟ್ಟದ ಸಭೆ ಬಳಿಕ ಈ ಬಂಧನ ನಡೆದಿದೆ.

ಪ್ರತಿಭಟನಾಕಾರರನ್ನು ಬಂಧಿಸಿದ ಕುರಿತು ಮಾತನಾಡಿದ ಕೇರಳ ಬಿಜೆಪಿ ಮುಖ್ಯಸ್ಥ ಪಿಎಸ್ ಶ್ರೀಧರನ್ ಪಿಳ್ಳೈ, ಭಕ್ತರ ಮೇಲೆ ಪೊಲೀಸರ ಕ್ರಮ ಖಂಡಿಸಿ ತಾವು ಹೈಕೋರ್ಟ್ ಮೊರೆ ಹೋಗುವುದಾಗಿ ಹೇಳಿದ್ದಾರೆ.

10ರಿಂದ 50 ವರ್ಷದೊಳಗಿನ ಯುವತಿಯರು ಮತ್ತು ಮಹಿಳೆಯರು ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಿಸಬಹುದು ಎಂದು ಇತ್ತೀಚೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯಕ್ಕೆ ಧಕ್ಕೆಯಾಗಿದೆ ಎಂದು ಅಲ್ಲಿನ ಭಕ್ತರು ಆರೋಪಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT