ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ 
ದೇಶ

ಸಿಬಿಐ ಒಳಜಗಳ: 14 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸಲು ಸಿವಿಸಿಗೆ ಸುಪ್ರೀಂ ಕೋರ್ಟ್ ಸೂಚನೆ

ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ಅವರ ಮೇಲಿನ ಆರೋಪಗಳ ಕುರಿತು 10 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸುವಂತೆ...

ನವದೆಹಲಿ: ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ಅವರ ಮೇಲಿನ ಆರೋಪಗಳ ಕುರಿತು 14 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸುವಂತೆ ಸಿವಿಸಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚಿಸಿದೆ. 
ಕೇಂದ್ರ ಸರ್ಕಾರದ ರಾತ್ರೋರಾತ್ರಿ ಕಡ್ಡಾಯ ರಜೆ ಪ್ರಶ್ನಿಸಿ ಅಲೋಕ್ ವರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾಯಮೂರ್ತಿ ಎಸ್.ಕೆ.ಕೌಲ್ ಮತ್ತು ಕೆ.ಎಂ. ಜೋಸೆಫ್ ಅವರಿದ್ದ ಪೀಠ, 14 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸಿವಿಸಿಗೆ ಸೂಚನೆ ನೀಡಿದೆ. 
ಅಲೋಕ್ ವರ್ಮಾ ಪರವಾಗಿ ಹಿರಿಯ ವಕೀಲ ಫಾಲಿ ನಾರಿಮನ್ ಹಾಗೂ ಸಂಜಯ್ ಹೆಗ್ಡೆಯವರು ವಾದ ಮಂಡಿಸಿದ್ದರು. ಕೇಂದ್ರ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರು ವಾದ ಮಂಡಿಸಿದರು. 

ವಿಚಾರಣೆ ವೇಳೆ ವಾದ ಮಂಡಿಸಿದ ಸಿವಿಸಿ ಪರ ವಕೀಲರು ತನಿಖೆಗೆ ಹೆಚ್ಚಿನ ಸಮಯ ನೀಡುವಂತೆ ನ್ಯಾಯಾಲಯದ ಮುಂದೆ ಮನವಿ ಮಾಡಿಕೊಂಡರು. ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಈ ವಿಚಾರದಲ್ಲಿ ಹೆಚ್ಚಿನ ಸಮಯ ನೀಡಲು ಸಾಧ್ಯವಿಲ್ಲ. ದೇಶದ ಹಿತದೃಷ್ಟಿಯಿಂದ ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಅಲೋಕ್ ವರ್ಮಾ ವಿರುದ್ಧ ಕೇಳಿ ಬಂದಿರುವ ಆರೋಪ ಸಂಬಂಧ 14 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿತು. 

ಅಲ್ಲದೆ, ಸಿಬಿಐ ಹಂಗಾಮಿ ನಿರ್ದೇಶಕ ನಾಗೇಶ್ವರ್ ರಾವ್ ಅವರು ಯಾವುದೇ ನಿರ್ಧಾರಗಳನ್ನು ಕೈಗೊಳ್ಳದಂತೆ ತಿಳಿಸಿದ ನ್ಯಾಯಾಲಯ, ಕೇವಲ ದೈನಂದಿನ ಕಾರ್ಯ ನೋಡಿಕೊಳ್ಳಬಹುದು ಎಂದು ಹೇಳಿದೆ. 
ಪ್ರಕರಣ ಸಂಬಂಧ ಕೇಂದ್ರ ಹಾಗೂ ಸಿವಿಸಿಗೆ ನೋಟಿಸ್ ಜಾರಿ ಮಾಡಿರುವ ನ್ಯಾಯಾಲಯ, ಸಿಬಿಐ ಹಂಗಾಮಿ ನಿರ್ದೇಶಕ ರಾವ್ ಅಧಿಕಾರ ವಹಿಸಿಕೊಂಡ ಬಳಿಕ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಮುಚ್ಚಿದ ಲಕೋಟೆಯಲ್ಲಿ ತಿಳಿಸುವಂತೆ ಸೂಚನೆ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ