ಎನ್'ಸಿಪಿ ಮಾಜಿ ಮುಖಂಡ ತರೀಖ್ ಅನ್ವಾರ್ ಕಾಂಗ್ರೆಸ್'ಗೆ ಸೇರ್ಪಡೆ 
ದೇಶ

ಎನ್'ಸಿಪಿ ಮಾಜಿ ಮುಖಂಡ ತರೀಖ್ ಅನ್ವಾರ್ ಕಾಂಗ್ರೆಸ್'ಗೆ ಸೇರ್ಪಡೆ

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಬೆನ್ನಲ್ಲೇ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಎನ್'ಸಿಪಿ ಮಾಜಿ ಮುಖಂಡ ತರೀಖ್ ಅನ್ವಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಶನಿವಾರ ಸೇರ್ಪಡೆಗೊಂಡಿದ್ದಾರೆ...

ನವದೆಹಲಿ: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಬೆನ್ನಲ್ಲೇ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಎನ್'ಸಿಪಿ ಮಾಜಿ ಮುಖಂಡ ತರೀಖ್ ಅನ್ವಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಶನಿವಾರ ಸೇರ್ಪಡೆಗೊಂಡಿದ್ದಾರೆ. 
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ತರೀಖ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆಂದು ತಿಳಿದುಬಂದಿದೆ. 
ಇಂದು ಬೆಳಿಗ್ಗೆ ತುಘಲಕ್ ಲೇನ್ ನಲ್ಲಿರುವ ರಾಹುಲ್ ಗಾಂಧಿಯವರ ನಿವಾಸಕ್ಕೆ ಭೇಟಿ ನೀಡಿದ ಅನ್ವಾರ್ ಹಾಗೂ ಅವರ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರುಎಂದು ವರದಿಗಳು ತಿಳಿಸಿವೆ. 
ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದವನ್ನು ಶರದ್ ಪವಾರ್ ಅವರು ಸಮರ್ಥಿಸಿಕೊಂಡ ಹಿನ್ನಲೆಯಲ್ಲಿ ಸೆ.28 ರಂದು ಪಕ್ಷ ತೊರೆಯುವುದಾಗಿ ಅನ್ವಾರ್ ಅವರು ಹೇಳಿದ್ದರು. 
ಅನ್ವಾರ್ ಅವರು 1980ರಲ್ಲಿ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿದ್ದರು. ಅಲ್ಲದೇ ಕಾಟಿಹಾರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿ ಸಂಸದರಾಗಿದ್ದರು. 1999ರಲ್ಲಿ ಪವಾರ್ ಹಾಗೂ ಮೇಘಾಲಯದ ದಿವಂಗತ ಪಿ.ಎ. ಸಂಗ್ಮಾ ಜೊತೆಗೂಡಿ ಎನ್'ಸಿಪಿ ಸ್ಥಾಪಿಸಲು ಕೈಜೋಡಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮ ಕಡೆಯಿಂದ ವೈಮಾನಿಕ ದಾಳಿ ಇರುವುದಿಲ್ಲ: 5 ವರ್ಷಗಳಲ್ಲಿ ಮೊದಲ ಬಾರಿಗೆ ಕದನ ವಿರಾಮ ಪ್ರಸ್ತಾಪಿಸಿದ ಯುಕ್ರೇನ್ ಅಧ್ಯಕ್ಷ Zelensky

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!