ಕಾಂಗ್ರೆಸ್ ನಿಂದ ಮೋಸಕ್ಕೊಳಗಾದವರು #MeToo ಅಭಿಯಾನ ಆರಂಭಿಸುತ್ತಾರೆ: ರಾಜನಾಥ್ ಸಿಂಗ್ 
ದೇಶ

ಕಾಂಗ್ರೆಸ್ ನಿಂದ ಮೋಸಕ್ಕೊಳಗಾದವರು #MeToo ಅಭಿಯಾನ ಆರಂಭಿಸುತ್ತಾರೆ: ರಾಜನಾಥ್ ಸಿಂಗ್

ಕಾಂಗ್ರೆಸ್ ಪಕ್ಷದಿಂದ ವಂಚನೆಗೊಳಗಾಗಿರುವವರು ಶೀಘ್ರವೇ #MeToo ಅಭಿಯಾನ ಕೈಗೊಳ್ಳಲಿದ್ದಾರೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ನವದೆಹಲಿ: ಕಾಂಗ್ರೆಸ್ ಪಕ್ಷದಿಂದ ವಂಚನೆಗೊಳಗಾಗಿರುವವರು ಶೀಘ್ರವೇ #MeToo ಅಭಿಯಾನ ಕೈಗೊಳ್ಳಲಿದ್ದಾರೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ಸೇರುತ್ತಿರುವವರನ್ನು ಯಾರೂ ರಕ್ಷಿಸುವುದಕ್ಕೆ ಸಾಧ್ಯವಿಲ್ಲ. ಎಲ್ಲಾ ವಿಪಕ್ಷಗಳೂ ಒಟ್ಟಿಗೇ ಸೇರಿದರೆ ಪರಿಸ್ಥಿತಿ ಏನಾಗಬಹುದು? ಆ ನಂತರ ಕಾಂಗ್ರೆಸ್ ನಿಂದ ವಂಚನೆಗೊಳಗಾದವರು #MeToo ಅಭಿಯಾನ ಪ್ರಾರಂಭಿಸಲಿದ್ದಾರೆ ಎಂದು ರಾಜನಾಥ್ ಸಿಂಗ್ ವ್ಯಂಗ್ಯ ಧಾಟಿಯಲ್ಲಿ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಜೊತೆ ಕೈ ಜೋಡಿಸುತ್ತಿರುವವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
ಇತ್ತೀಚಿನ ದಿನಗಳಲ್ಲಿ ಮಾಜಿ ಕೇಂದ್ರ ಸಚಿವ ಬಿಜೆಪಿ ನಾಯಕರಾಗಿದ್ದ ಜಸ್ವಂತ್ ಸಿನ್ಹಾ ಪುತ್ರ ಮನ್ವೀಂದರ್ ಸಿನ್ಹಾ ಹಾಗೂ ಮಹಾರಾಷ್ಟ್ರದ ಮಾಜಿ ಬಿಜೆಪಿ ಶಾಸಕ ಆಶಿಶ್ ದೇಶ್ಮುಖ್ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಗ್ಗೆ ರಾಜನಾಥ್ ಸಿಂಗ್ ಈ ಹೇಳಿಕೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT