ಅಮಿತ್ ಶಾ ಹೇಳಿಕೆ ಶಬರಿಮಲೆಯಲ್ಲಿ ಹಿಂಸಾಚಾರಕ್ಕೆ ಯಾರು ಕಾರಣ ಎಂಬುದನ್ನು ತೋರಿಸುತ್ತದೆ: ಸಿಪಿಐ-ಎಂ 
ದೇಶ

ಅಮಿತ್ ಶಾ ಹೇಳಿಕೆ ಶಬರಿಮಲೆಯಲ್ಲಿ ಹಿಂಸಾಚಾರಕ್ಕೆ ಯಾರು ಕಾರಣ ಎಂಬುದನ್ನು ತೋರಿಸುತ್ತದೆ: ಸಿಪಿಐ-ಎಂ

ಶಬರಿಮಲೆಯಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇರಳದ ಆಡಳಿತಾರೂಢ ಪಕ್ಷ ಸಿಪಿಐ-ಎಂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದೆ.

ತಿರುವನಂತಪುರಂ: ಶಬರಿಮಲೆಯಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇರಳದ ಆಡಳಿತಾರೂಢ ಪಕ್ಷ ಸಿಪಿಐ-ಎಂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದೆ. 
ಹಿಂಸಾಚಾರಕ್ಕೆ ಕಾರಣ ಯಾರು ಎಂಬುದನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಹೇಳಿಕೆಯೇ ತೋರಿಸುತ್ತದೆ ಎಂದು ಸಿಪಿಐ-ಎಂ ಪಾಲಿಟ್ ಬ್ಯೂರೋ ಹೇಳಿದೆ.  ಸ್ವಾಮಿ ಸಂದೀಪಾನಂದ ಗಿರಿ ಅವರ ಆಶ್ರಮದ ಮೇಲೆ ನಡೆದಿರುವ ಖಂಡನಾರ್ಹ ದಾಳಿಗೂ ಅಮಿತ್ ಶಾ ಅವರ ಹೇಳಿಕೆಯೇ ಪ್ರಚೋದನೆ. ಸುಪ್ರೀಂ ಕೋರ್ಟ್ ತೀರ್ಪನ್ನೇ ಟೀಕಿಸುವಂತಿರುವ ಅಮಿತ್ ಶಾ ಅವರ ಹೇಳಿಕೆ ಸಂವಿಧಾನ ಹಾಗೂ ಸುಪ್ರೀಂ ಕೋರ್ಟ್ ನಿಂದನೆ ಎಂದು ಹೇಳಿದೆ. 
ಶಬರಿಮಲೆ ದೇವಾಲಯದ ಸಂಪ್ರದಾಯಗಳನ್ನು ಮುರಿದರೆ ಕೇರಳ ಸರ್ಕಾರವನ್ನು ಕಿತ್ತೊಗೆಯಬೇಕಾಗುತ್ತದೆ ಎಂದು ಅಮಿತ್ ಶಾ ಎಚ್ಚರಿಸಿದ್ದರು. ಸುಪ್ರೀಂ ಕೋರ್ಟ್ ತೀರ್ಪನ್ನು ಪಾಲಿಸುವುದಕ್ಕಾಗಿ ಕೇರಳ ಸರ್ಕಾರವನ್ನು ಕಿತ್ತೊಗೆಯಬೇಕಾಗುತ್ತದೆ ಎಂಬ ಹೇಳಿಕೆ ಪ್ರಜಾಪ್ರಭುತ್ವದ ವಿರೋಧಿಯಾಗಿದೆ ಎಂದು ಸಿಪಿಐ-ಎಂ ಆರೋಪಿಸಿದ್ದು ಕೇರಳದ ಜನತೆ ಬಿಜೆಪಿ-ಆರ್ ಎಸ್ಎಸ್ ನ್ನುಒಪ್ಪುವುದಿಲ್ಲ ಎಂದು ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT