ಅಮಿತ್ ಶಾ 
ದೇಶ

ಶಬರಿಮಲೆ ಅಯ್ಯಪ್ಪನ ಸನ್ನಿಧಾನಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ?

ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶ ನಿರ್ಬಂಧಿಸುವ ಸಂಪ್ರದಾಯಕ್ಕೆ ಬೆಂಬಲ ಸೂಚಿಸಿ ಅಯ್ಯಪ್ಪ ಭಕ್ತರ ಪರ ನಿಂತಿರುವ ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ.....

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶ ನಿರ್ಬಂಧಿಸುವ ಸಂಪ್ರದಾಯಕ್ಕೆ ಬೆಂಬಲ ಸೂಚಿಸಿ ಅಯ್ಯಪ್ಪ ಭಕ್ತರ ಪರ ನಿಂತಿರುವ ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಈಗ ತಾವೂ ಅಯ್ಯಪ್ಪನ ದರ್ಶನಕ್ಕೆ ಬಯಸಿದ್ದಾರೆ.
ಇದೇ ನವೆಂಬರ್ 17ರಿಂದ ಶಬರಿಮಲೆಯ ಈ ವರ್ಷದ ಮಂಡಲ ಪೂಜಾ ಕೈಂಕರ್ಯಗಳು ಪ್ರಾರಂಬವಾಗಲಿದೆ.ಈ ವೇಳೆ ಅಮಿತ್ ಶಾ ತಾವು ಬೆಟ್ಟದ ಮೇಲಿನ ಯ್ಯಪ್ಪಸ್ವಾಮಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸುವ ಯೋಜನೆ ಇದೆ ಎನ್ನಲಾಗಿದೆ.
"ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡಬೇಕೆಂದು ಅಮಿತ್ ಶಾ ಬಯಸಿದ್ದಾರೆ. ಆದರೆ ಈ ಸಂಬಂಧ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಿದೆ" ಕೇರಳ ಬಿಜೆಪಿ ಹಿರಿಯ ನಾಯಕರು ಹೇಳಿದ್ದಾರೆ.
ದೇವಾಲಯದ ಆವರಣಕ್ಕೆ 10-50 ವಯೋಮಾನದ ಮಹಿಳೆಯರ ಪ್ರವೇಶ ನಿಷೇಧವನ್ನು ಹಿಂಪಡೆಯುವ ಸುಪ್ರೀಂ ಆದೇಶ ಜಾರಿಗೆ ಮುಂದಾಗಿರುವ ಸಿಪಿಎಂ-ನೇತೃತ್ವ ಎಡಪಂಥೀಯ ಪ್ರಜಾಸತ್ತಾತ್ಮಕ ಸರ್ಕಾರದ ನಿರ್ಧಾರದ ವಿರುದ್ಧ ಅಯ್ಯಪ್ಪ ಭಕ್ತರಿಗೆ ತನ್ನ ಸಂಪೂರ್ಣ ಬೆಂಬಲವನ್ನು ಬಿಜೆಪಿ ಘೋಷಿಸಿದೆ.
ಶಬರಿಮಲೆ ಭಕ್ತಾದಿಗಳ ವಿರುದ್ಧ ಕೇರಳ ಸರ್ಕಾರ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮಗಳ ಕುರಿತಂತೆ ಕಳೆದ ವಾರ ಮಾತನಾಡಿದ್ದ ಶಾ ಇದು  "ತುರ್ತು ಪರಿಸ್ಥಿತಿ"ಯನ್ನು ನೆನಪಿಸುವಂತಾ ಆಡಳಿತ ಕ್ರಮ ಎಂದಿದ್ದರು. ಅಲ್ಲದೆ ಸರ್ಕಾರವು "ಬೆಂಕಿಯೊಂದಿಗೆ ಸರಸವಾಡುತ್ತಿದೆ"ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT