ಶಬರಿಮಲೆ 
ದೇಶ

ಶಬರಿಮಲೆಗೆ ಎಲ್ಲಾ ಧರ್ಮದವರೂ ಹೋಗಬಹುದು: ಕೇರಳ ಹೈಕೋರ್ಟ್

ಶಬರಿಮಲೆಗೆ ಎಲ್ಲರೂ ಹೋಗಬಹುದು. ಎಲ್ಲಾ ಧರ್ಮದ, ಜಾತಿಯ ಜನರು ಪ್ರವೇಶಿಸುವ ಮತ್ತು ಪೂಜಿಸುವ...

ಕೊಚ್ಚಿ: ಶಬರಿಮಲೆಗೆ ಎಲ್ಲರೂ ಹೋಗಬಹುದು. ಎಲ್ಲಾ ಧರ್ಮದ, ಜಾತಿಯ ಜನರು ಪ್ರವೇಶಿಸುವ ಮತ್ತು ಪೂಜಿಸುವ ರಾಜ್ಯದ ಏಕೈಕ ದೇವಸ್ಥಾನ ಅಯ್ಯಸ್ವಾಮಿ ದೇವಸ್ಥಾನವಾಗಿದ್ದು, ಹಿಂದೂಗಳಲ್ಲದವರಿಗೆ ಪ್ರವೇಶ ನಿಷೇಧಿಸಿದರೆ ಜಾತ್ಯತೀತ ಮೌಲ್ಯಗಳು ನಾಶವಾಗಲಿವೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ಶಬರಿಮಲೆಗೆ ಹಿಂದೂಗಳಲ್ಲದವರಿಗೆ ನಿಷೇಧ ಹೇರುವಂತೆ ಕೋರಿ ಬಿಜೆಪಿ ನಾಯಕ ಟಿಜಿ ಮೋಹನದಾಸ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಈ ಅರ್ಜಿ ಸಮಾಜವನ್ನು ಒಡೆಯಲಿದೆ ಅಥವಾ ಪ್ರತ್ಯೇಕಿಸಲಿದೆ ಎಂದು ಹೇಳಿದೆ. 
ಇರುಮುಡಿ ಇಲ್ಲದಯೇ ಭಕ್ತರು ಅಯ್ಯಪ್ಪಸ್ವಾಮಿ ದರ್ಶನ ಪಡೆಯಬಹುದು. 18 ಮೆಟ್ಟಿಲು ಹತ್ತಲು ಮಾತ್ರ ಇರುಮುಡಿ ಕಡ್ಡಾಯವಾಗಿದೆ. ಇರುಮುಡಿ ಇಲ್ಲದೆ ಇದ್ದವರು ದೇವಸ್ಥಾನದ ಮತ್ತೊಂದು ಬಾಗಿಲು ಮೂಲಕ ಪ್ರವೇಶಿಸಬೇಕು. ಇದು ದೇವಾಲಯದಲ್ಲಿ ಇಷ್ಟು ವರ್ಷಗಳಿಂದ ನಡೆದುಕೊಂಡು ಬಂದ ಸಂಪ್ರದಾಯ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
ಈ ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ, ಅರ್ಜಿಯ ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT