ಸಿಬಿಐಯ ಉಪ ಪೊಲೀಸ್ ಅಧೀಕ್ಷಕ ಎ ಕೆ ಬಸ್ಸಿ 
ದೇಶ

ಸಿಬಿಐ ಒಳಜಗಳ: ವರ್ಗಾವಣೆ ಪ್ರಶ್ನಿಸಿ 'ಸುಪ್ರೀಂ' ಮೊರೆ ಹೋದ ಎ ಕೆ ಬಸ್ಸಿ

ತಮ್ಮ ವರ್ಗಾವಣೆ ಪ್ರಶ್ನಿಸಿ ಸಿಬಿಐಯ ಉಪ ಪೊಲೀಸ್ ಅಧೀಕ್ಷಕ ಎ ಕೆ ಬಸ್ಸಿ ಮಂಗಳವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಇವರು ಸಿಬಿಐನ ವಿಶೇಷ ನಿರ್ದೇಶಕ ರಾಕೇಶ್ ...

ನವದೆಹಲಿ: ತಮ್ಮ ವರ್ಗಾವಣೆ ಪ್ರಶ್ನಿಸಿ ಸಿಬಿಐಯ ಉಪ ಪೊಲೀಸ್ ಅಧೀಕ್ಷಕ ಎ ಕೆ ಬಸ್ಸಿ ಮಂಗಳವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಸಿಬಿಐನ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ವಿರುದ್ಧ ಕೇಳಿಬರುತ್ತಿರುವ ಲಂಚ ಸ್ವೀಕಾರ ಆರೋಪದ ತನಿಖೆಯನ್ನು ಬಸ್ಸಿ ನಡೆಸುತ್ತಿದ್ದರು.

ಆದರೆ ನ್ಯಾಯಾಲಯ ಕೇಸಿನ ತುರ್ತು ವಿಚಾರಣೆ ನಡೆಸಲು ನಿರಾಕರಿಸಿದೆ. ಎ ಕೆ ಬಸ್ಸಿ ರಾಕೇಶ್ ಅಸ್ತಾನಾ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದ್ದರು.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಎ ಕೆ ಬಸ್ಸಿ, ಲಂಚ ಪ್ರಕರಣದಲ್ಲಿ ರಾಕೇಶ್ ಅಸ್ತಾನಾ ವಿರುದ್ಧ ತಮ್ಮ ಬಳಿ ದೋಷಾರೋಪಣಾ ಸಾಕ್ಷಿಗಳಿದ್ದು ತಾಂತ್ರಿಕ ಕಣ್ಗಾವಲಿಗೆ ಸಾಕ್ಷಿಗಳನ್ನು ಕರೆಯಬೇಕೆಂದು ಸಹ ನ್ಯಾಯಾಲಯವನ್ನು ಕೋರಿರುವುದಾಗಿ ತಿಳಿಸಿದ್ದಾರೆ. ಅಸ್ತಾನಾ ವಿರುದ್ಧ ಕೇಳಿಬರುತ್ತಿರುವ ಆರೋಪಗಳಿಗೆ ಸಂಬಂಧಪಟ್ಟಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಬೇಕೆಂದು ಅವರು ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ.

ಎ ಕೆ ಬಸ್ಸಿ ಅವರನ್ನು ಸಾರ್ವಜನಿಕ ಹಿತಾಸಕ್ತಿ ಕಾರಣ ನೀಡಿ ಪೋರ್ಟ್ ಬ್ಲೇರ್ ಅಂಡಮಾನ್ ಜೈಲ್ ಗೆ ವರ್ಗಾಯಿಸಲಾಗಿತ್ತು. ಈ ಹಿಂದೆ ಕೇಂದ್ರ ಜಾಗೃತ ಆಯೋಗಕ್ಕೆ ದೂರು ನೀಡಿದ್ದ ಅಸ್ತಾನಾ, ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ನಿರ್ದೇಶನದ ಮೇರೆಗೆ ಬಸ್ಸಿ ನನ್ನ ವಿರುದ್ಧ ತನಿಖೆ ನಡೆಸುತ್ತಿದ್ದಾರೆ. ಬಸ್ಸಿ ಹಾಗೂ ಜಂಟಿ ನಿರ್ದೇಶಕ ಎ ಕೆ ಶರ್ಮ ಅವರನ್ನು ನನ್ನ ವಿರುದ್ಧ ಮಾಹಿತಿ ಸಂಗ್ರಹಿಸಲು ಗುಜರಾತ್ ಗೆ ಕಳುಹಿಸಲಾಗಿತ್ತು ಎಂದು ಆರೋಪಿಸಿದ್ದರು.

ಬಸ್ಸಿ ಅವರ ವರ್ಗಾವಣೆ ಪ್ರಧಾನಿ ಮೋದಿಯವರ ನಿರಂಕುಶ ಆಡಳಿತವನ್ನು ಬಿಂಬಿಸುತ್ತದೆ ಎಂದು ಕಾಂಗ್ರೆಸ್ ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT