ಶಿವರಾಜ್ ಸಿಂಗ್ ಪುತ್ರನ ವಿರುದ್ಧ ಪನಾಮ ಆರೋಪ: ಕನ್ಫ್ಯೂಸ್ ಆಯ್ತು ಅಂದ್ರು ರಾಹುಲ್ ಗಾಂಧಿ 
ದೇಶ

ಶಿವರಾಜ್ ಸಿಂಗ್ ಪುತ್ರನ ವಿರುದ್ಧ ಪನಾಮ ಆರೋಪ: ಕನ್ಫ್ಯೂಸ್ ಆಯ್ತು ಅಂದ್ರು ರಾಹುಲ್ ಗಾಂಧಿ

ಮಧ್ಯಪ್ರದೇಶ ಚುನಾವಣಾ ಸಮಾವೇಶದಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ವಿರುದ್ಧ ಪನಾಮ ಪೇಪರ್ ಹಗರಣದ ಆರೋಪ ಮಾಡಿದ್ದ ರಾಹುಲ್ ಗಾಂಧಿ ತಮಗೆ ಗೊಂದಲ ಆಗಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ.

ಮಧ್ಯಪ್ರದೇಶ ಚುನಾವಣಾ ಸಮಾವೇಶದಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ  ವಿರುದ್ಧ ಪನಾಮ ಪೇಪರ್ ಹಗರಣದ ಆರೋಪ ಮಾಡಿದ್ದ ರಾಹುಲ್ ಗಾಂಧಿ ತಮಗೆ ಗೊಂದಲ ಆಗಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ. 
ಪನಾಮ ಹಗರಣದ ಆರೋಪ ಮಾಡಿದ್ದ ರಾಹುಲ್ ಗಾಂಧಿ ವಿರುದ್ಧ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಪುತ್ರ ಕಾರ್ತಿಕೇಯ್ ಚೌಹಾಣ್ ಮಾನನಷ್ಟ ಪ್ರಕರಣ ದಾಖಲಿಸಿದ್ದಾರೆ. ಇದಕ್ಕೂ ಮುನ್ನ ಸ್ಪಷ್ಟನೆ ನೀಡಿರುವ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ದೇಶಾದ್ಯಂತ ಹಲವು ಭ್ರಷ್ಟಾಚಾರ ಆರೋಪ ಇತ್ತು. ಈ ಹಿನ್ನೆಲೆಯಲ್ಲಿ ಗೊಂದಲದಲ್ಲಿ ಪನಾಮ ಹಗರಣದ ಆರೋಪ ಮಾಡಿಬಿಟ್ಟೆ ಎಂದು ಹೇಳಿದ್ದಾರೆ. 
ಬಿಜೆಪಿ ವಿರುದ್ಧ ಎಷ್ಟು ವ್ಯಾಪಕವಾದ ಹಗರಣಗಳಿವೆ ಎಂದರೆ ನಾನು ಗೊಂದಲಕ್ಕೀಡಾಗಿ ಪನಾಮ ಪೇಪರ್ಸ್ ಹಗರಣದ ಆರೋಪ ಮಾಡಿಬಿಟ್ಟೆ, ಆದರೆ ಶಿವರಾಜ್ ಸಿಂಗ್ ಚೌಹಾಣ್ ಅವರ ಪುತ್ರನ ವಿರುದ್ಧ ಪನಾಮ ಪೇಪರ್ ಹಗರಣದ ಆರೋಪವಿಲ್ಲ, ಬದಲಾಗಿ ಇ-ಟೆಂಡರಿಂಗ್ ಹಾಗೂ ವ್ಯಾಪಂ ಹಗರಣದ ಆರೋಪಗಳಿವೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT