ದೇಶ

ಏರ್ ಸೆಲ್‌–ಮ್ಯಾಕ್ಸಿಸ್‌ ಹಗರಣ: ತನಿಖೆಗೆ ಸಹಕರಿಸದ ಚಿದಂಬರಂರನ್ನು ಕಸ್ಟಡಿಗೆ ಒಪ್ಪಿಸಿ - ಇಡಿ

Lingaraj Badiger
ನವದೆಹಲಿ: ಏರ್ ​ಸೆಲ್-ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರಿಗೆ ನೀಡಿದ ನಿರೀಕ್ಷಣಾ ಜಾಮೀನಿಗೆ ಜಾರಿ ನಿರ್ದೇಶನಲಾಯ(ಇಡಿ) ಬುಧವಾರ ತೀವ್ರ ವಿರೋಧ ವ್ಯಕ್ತಿಪಡಿಸಿದೆ.
ಪ್ರಕರಣದಲ್ಲಿ ಆರೋಪಿಯಾಗಿರುವ ಚಿದಂಬರಂ ಅವರು ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ. ಹೀಗಾಗಿ ಅವರನ್ನ ವಿಚಾರಣೆಗೊಳಪಡಿಸಲು ತಮ್ಮ ವಶಕ್ಕೆ ಒಪ್ಪಿಸಿ ಎಂದು ಜಾರಿ ನಿರ್ದೇಶನಾಲಯ ಇಂದು ದೆಹಲಿ ಹೈಕೋರ್ಟ್​ಗೆ ಮನವಿ ಮಾಡಿದೆ. 
ಚಿದಂಬರಂ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅದಕ್ಕೆ ಪ್ರತಿಯಾಗಿ ಇಡಿ ಈ ಮನವಿ ಮಾಡಿದೆ.
ಸಿಬಿಐ ವಿಶೇಷ ನ್ಯಾಯಾಧೀಶ ಒ.ಪಿ. ಸೈನಿ ಅವರು ನಾಳೆ ಚಿದಂಬರಂ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದ್ದಾರೆ.
ಏರ್ ​ಸೆಲ್-ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 25ರಂದು  ಜಾರಿ ನಿರ್ದೇಶನಾಲಯ ಚಿದಂಬರಂ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ದಾಖಲಿಸಿತ್ತು.
SCROLL FOR NEXT