ಆರ್ ಬಿಐ ಗೆ ಸ್ವಾಯತ್ತತೆ ಅಗತ್ಯ, ಸರ್ಕಾರ ಅದನ್ನು ಗೌರವಿಸಿದೆ: ಹಣಕಾಸು ಇಲಾಖೆ 
ದೇಶ

ಆರ್ ಬಿಐ ಗೆ ಸ್ವಾಯತ್ತತೆ ಅಗತ್ಯ, ಸರ್ಕಾರ ಅದನ್ನು ಗೌರವಿಸಿದೆ: ಹಣಕಾಸು ಸಚಿವಾಲಯ

ಆರ್ ಬಿಐ ನ ಸ್ವಾಯತ್ತತೆ ಅಗತ್ಯ, ಅದನ್ನು ಸರ್ಕಾರ ಪಾಲನೆ ಮಾಡಿ ಗೌರವಿಸುತ್ತಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.

ನವದೆಹಲಿ: ಆರ್ ಬಿಐ ಹಾಗೂ ಕೇಂದ್ರದ ನಡುವೆ ಉಂಟಾಗಿದ್ದ ತಿಕ್ಕಾಟ ಕೊನೆಗೂ ಅಂತ್ಯಗೊಂಡಿದ್ದು,  ಆರ್ ಬಿಐ ನ ಸ್ವಾಯತ್ತತೆ ಅಗತ್ಯ, ಅದನ್ನು ಸರ್ಕಾರ ಪಾಲನೆ ಮಾಡಿ ಗೌರವಿಸುತ್ತಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ. 
ಆರ್ ಬಿಐ ಕಾಯ್ದೆಯ ಚೌಕಟ್ಟಿನಲ್ಲಿ ಸ್ವಾಯತ್ತತೆಯನ್ನು ಸರ್ಕಾರ ಎಂದಿಗೂ ಗೌರವಿಸುತ್ತದೆ, ಅದನ್ನು ಈ ವರೆಗೂ ಪಾಲನೆ ಮಾಡಲಾಗಿದೆ. ಅಷ್ಟೇ ಅಲ್ಲದೇ ಹಲವು ವಿಷಯಗಳಲ್ಲಿ  ವ್ಯಾಪಕ ಸಮಾಲೋಚನೆಗಳನ್ನೂ ನಡೆಸಲಾಗಿದೆ ಎಂದು ಹೇಳಿದೆ.  ಕೇಂದ್ರ ಸರ್ಕಾರ ಹಾಗೂ ಆರ್ ಬಿಐ ಎರಡೂ ಸಹ ಸಾರ್ವಜನಿಕ ಹಿತಾಸಕ್ತಿಯನ್ನು, ದೇಶದ ಆರ್ಥಿಕತೆಯನ್ನು ಮುಂದಿಟ್ಟುಕೊಂಡು ನಡೆಯಬೇಕಿದೆ ಎಂದು ಹಣಕಾಸು ಇಲಾಖೆಯ ಪ್ರಕಟಣೆ ತಿಳಿಸಿದೆ. 
ಕೇಂದ್ರ ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದ ಊರ್ಜಿತ್ ಪಟೇಲ್ ಅವರನ್ನು ದಾರಿಗೆ ತರಲು ಈ ಹಿಂದೆ ಸರ್ಕಾರ ಆರ್'ಬಿಐ ಕಾಯ್ದೆಯ 7ನೇ ಸೆಕ್ಷನ್ ಅನ್ವಯ ಸೂಚನೆಗಳನ್ನು ರವಾನಿಸಿತ್ತು. ಇದು ಆರ್ ಬಿಐ ನ ಸ್ವಾಯತ್ತತೆಯನ್ನು ಕೇಂದ್ರ ಗೌರವಿಸುತ್ತಿಲ್ಲ ಎಂಬ ಆರೋಪಕ್ಕೆ ಗುರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆ ಸ್ಪಷ್ಟನೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT