ನಕ್ಸಲರ ದಾಳಿಯಲ್ಲಿ ಗಾಯಗೊಂಡಿದ್ದ ಪೊಲೀಸ್ನನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದು 
ದೇಶ

ದಂತೇವಾಡ ನಕ್ಸಲ್ ದಾಳಿ: ಗಾಯಗೊಂಡಿದ್ದ ಪೊಲೀಸ್ ಹುತಾತ್ಮ, ಸಾವಿನ ಸಂಖ್ಯೆ 4ಕ್ಕೆ ಏರಿಕೆ

ಛತ್ತೀಸ್ಗಢದ ದಂತೇವಾಡ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ್ದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಒಬ್ಬರು ಮಂಗಳವಾರ ಹುತಾತ್ಮರಾಗಿದ್ದು, ಇದರಂತೆ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ...

ರಾಯ್ಪುರ: ಛತ್ತೀಸ್ಗಢದ ದಂತೇವಾಡ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ್ದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಒಬ್ಬರು ಮಂಗಳವಾರ ಹುತಾತ್ಮರಾಗಿದ್ದು, ಇದರಂತೆ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. 
ನಕ್ಸಲರ ದಾಳಿ ವೇಳೆ ಸಹಾಯಕ ಪೊಲೀಸ್ ರಾಕೇಶ ಕೌಶಲ್ ಅವರು ಗಂಭೀರವಾಗಿ ಗಾಯಗೊಂಡಿದ್ದರು, ರಾಕೇಶ್ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಎಂದು ಹುತಾತ್ಮರಾಗಿದ್ದಾರೆ. 
ಡಿಡಿನ್ಯೂಸ್ ವರದಿಗಾರ ಧೀರಜ್ ಕುಮಾರ್, ಸಹಾಯಕ ಮೊರ್ಮುಕ್ತ ಹಾಗೂ ಕ್ಯಾಮೆರಾಮ್ಯಾನ್ ಸಾಹು ಅವರು ಚುನಾವಣಾ ವರದಿಗಾರಿಕೆಗಾಗಿ ಛತ್ತೀಸ್ಗಢಕ್ಕೆ ತೆರಳಿದ್ದರು. ರಾಜಧಾನಿ ರಾಯಪುರದಿಂದ ಸುಮಾರು 450 ಕಿ.ಮೀ ದೂರದಲ್ಲಿರುವ ನಿಲವಾಯ ಎಂಬ ಗ್ರಾಮದ ಬಳಿ ಈ ಸಿಬ್ಬಂದಿ ಎರಡು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ನಡುವೆ ಇವರ ಕಾರಿನ ಮುಂದೆ ಪೊಲೀಸರ ಗಸ್ತು ಬೈಕ್ ಗಳು ಹೋಗಿವೆ. ಆ ಸಂದರ್ಭದಲ್ಲಿ 100ಕ್ಕೂ ಹೆಚ್ಚು ಸಂಖ್ಯೆಯಲ್ಲಿದ್ದ ನಕ್ಸಲರು ಏಕಾಏಕಾ ದಾಳಿ ನಡೆಸಿದ್ದಾರೆ. 
ಈ ವೇಳೆ ಪೊಲೀಸರು ಪ್ರತಿ ದಾಳಿ ನಡೆಸಿದ್ದು, ಬರೋಬ್ಬರಿ 1 ಗಂಟೆಗೂ ಹೆಚ್ಚು ಗುಂಡಿನ ಚಕಮಕಿ ನಡೆದಿದೆ. ಈ ಚಕಮಕಿ ವೇಳೆ ದೂರದರ್ಶನದ ಪ್ರತಕರ್ತರು ಗಾಯಗೊಂಡಿದ್ದರು. ಛಾಯಾಗ್ರಾಹಕ ಸಾಹು ಘಟನೆಯಲ್ಲಿ ಮೃತಪಟ್ಟಿದ್ದರು. ಪೊಲೀಸರ ದಾಳಿ ಹೆಚ್ಚಾದ ಹಿನ್ನಲೆಯಲ್ಲಿ ನಕ್ಸಲರು ಸಮೀಪದ ಗ್ರಾಮಕ್ಕೆ ಓಡಿದ್ದರು. ಘಟನೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದರು, ಅಲ್ಲದೆ, ಮತ್ತಿಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

SCROLL FOR NEXT