ಆರ್'ಬಿಐ ಗವರ್ನರ್ ಊರ್ಜಿತ್ ಪಟೇಲ್ 
ದೇಶ

ತಾರಕಕ್ಕೇರಿದ ಆರ್'ಬಿಐ-ಕೇಂದ್ರದ ನಡುವಿನ ಸಂಘರ್ಷ: ಊರ್ಜಿತ್ ಪಟೇಲ್ ರಾಜೀನಾಮೆ ಸಾಧ್ಯತೆ?

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಕೇಂದ್ರ ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಈ ಹಿನ್ನಲೆಯಲ್ಲಿ ಆರ್'ಬಿಐ ಗವರ್ನರ್ ಊರ್ಜಿತ್ ಪಟೇಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ...

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಕೇಂದ್ರ ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಈ ಹಿನ್ನಲೆಯಲ್ಲಿ ಆರ್'ಬಿಐ ಗವರ್ನರ್ ಊರ್ಜಿತ್ ಪಟೇಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. 
ಊರ್ಜಿತ್ ಪಟೇಲ್ ಮತ್ತು ಕೇಂದ್ರದ ನಡುವೆ ಕೆಲ ದಿನಗಳಿಂದ ಸರಿಪಡಿಸಲಾಗದಂತಹ ಬಿಕ್ಕಟ್ಟು ಉದ್ಭವಿಸಿದ್ದು, ಹೀಗಾಗಿ ಪಟೇಲ್ ಅವರು ರಾಜೀನಾಮೆ ನೀಡುವ ಎಲ್ಲಾ ಸಾಧ್ಯತೆಗಳಿವೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. 
ಕೇಂದ್ರ ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದ ಊರ್ಜಿತ್ ಪಟೇಲ್ ಅವರನ್ನು ದಾರಿಗೆ ತರಲು ಈ ಹಿಂದೆ ಸರ್ಕಾರ ಆರ್'ಬಿಐ ಕಾಯ್ದೆಯ 7ನೇ ಸೆಕ್ಷನ್ ಅನ್ವಯ ಸೂಚನೆಗಳನ್ನು ರವಾನಿಸಿದ್ದು ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ. 
ಹೀಗಾಗಿ ಕೇಂದ್ರ ಸರ್ಕಾರ ಸೆಕ್ಷನ್ 7ರ ಅನ್ವಯ ತನ್ನ ನಿರ್ಧಾರಗಳನ್ನು ಹೇರಿದ್ದೇ ಆದರೆ, ಊರ್ಜಿತ್ ಪಟೇಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಆರ್'ಬಿಐ ಆಗಲೀ, ವಿತ್ತ ಸಚಿವಾಲಯವಾಗಲೀ ಯಾವುದೇ ರೀತಿಯ ಸ್ಪಷ್ಟೀಕರಣಗಳನ್ನು ನೀಡಿಲ್ಲ. 
1991 ಹಾಗೂ 2008ರಲ್ಲಿ ಆರ್ಥಿಕ ಬಿಕ್ಕಟ್ಟು ಉಂಟಾದಾಗಲೂ ಕೇಂದ್ರ ಸರ್ಕಾರ ಆರ್'ಬಿಐ ಮೇಲೆ ಸೆಕ್ಷನ್ 7 ಜಾರಿ ಮಾಡಿರಲಿಲ್ಲ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT