ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ 
ದೇಶ

'ತಮಸೋಮ ಜ್ಯೋತಿರ್ಗಮಯ': ಮಾನಸ ಸರೋವರ ಯಾತ್ರೆಯಲ್ಲಿ ರಾಹುಲ್, ಶ್ಲೋಕ ಟ್ವೀಟ್

ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಘೋಷಣೆ ಮಾಡಿದಂತೆಯೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ತಮ್ಮ ಬಹು ನಿರೀಕ್ಷೆಯ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಕೈಗೊಂಡಿದ್ದಾರೆ...

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಘೋಷಣೆ ಮಾಡಿದಂತೆಯೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ತಮ್ಮ ಬಹು ನಿರೀಕ್ಷೆಯ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಕೈಗೊಂಡಿದ್ದಾರೆ. 
ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರ ಸಂದರ್ಭದಲ್ಲಿ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಹುಬ್ಬಳ್ಳಿಯಲ್ಲಿ ಇಳಿಯುವಾಗ ತಾಂತ್ರಿಕ ದೋಷದಿಂದಾಗಿ ಇದ್ದಕ್ಕಿದ್ದಂತೆ ಎಡಭಾಗಕ್ಕೆವಾಲಿತ್ತು. ಆಗ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದರು. ಈ ವೇಳೆ ಮಾನಸ ಯಾತ್ರೆ ಕೈಗೊಳ್ಳುವುದಾಗಿ ಸಂಕಲ್ಪ ಮಾಡಿದ್ದರು. 
ರಾಹುಲ್ ಗಾಂಧಿಯವರ ಯಾತ್ರೆ ಕುರಿತಂತೆ ಲೇವಡಿ ಮಾಡಿದ್ದ ಬಿಜೆಪಿ, ಚೀನಾ ಮಾರ್ಗವಾಗಿ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಕೈಗೊಳ್ಳುವ ರಾಹುಲ್, ಚೈನೀಸ್ ಮ್ಯಾನ್ ಆಗಿದ್ದಾರೆಂದು ಹೇಳಿತ್ತು. ಅಲ್ಲದೆ, ನೀವು ಚೈನೀಸ್ ಗಾಂಧಿಯೋ, ರಾಹುಲ್ ಗಾಂಧಿಯೋ ಎಂದು ಪ್ರಶ್ನಿಸಿತ್ತು. 
ಬಿಜೆಪಿಯ ಟೀಕೆಗೆ ಉತ್ತರವೆಂಬಂತೆ ಮಾನಸ ಯಾತ್ರೆ ಕೈಗೊಂಡಿರುವ ರಾಹುಲ್ ಗಾಂಧಿಯವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಅಸತೋಮಾ ಸದ್ಗಮಯಾ ಎಂಬ ಪ್ರಾರ್ಥನಾ ಶ್ಲೋಕದ ಸಾಲುಗಳನ್ನು ಬರೆದಿದ್ದಾರೆ. (ಅಸತ್ಯದಿಂದ ಸತ್ಯದೆಡೆಗೆ ನಮ್ಮನ್ನು ನಡಸೆಂದು ದೇವರಲ್ಲಿ ಪ್ರಾರ್ಥನೆ ಮಾಡುವ ಸಾಲುಗಳು ಇದಾಗಿದೆ).

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT