ತೆಲಂಗಾಣ ರೈತರಿಗೆ ಕೆಸಿಆರ್ ಬಂಪರ್ ಗಿಫ್ಟ್: ಅವಧಿಪೂರ್ವ ಚುನಾವಣೆಯ ಮುನ್ಸೂಚನೆ! 
ದೇಶ

ತೆಲಂಗಾಣ ರೈತರಿಗೆ ಕೆಸಿಆರ್ ಬಂಪರ್ ಗಿಫ್ಟ್: ಅವಧಿಪೂರ್ವ ಚುನಾವಣೆಯ ಮುನ್ಸೂಚನೆ!

ತೆಲಂಗಾಣದಲ್ಲಿ ಬೃಹತ್ ಸಾರ್ವಜನಿಕ ಸಮಾವೇಶಕ್ಕೂ ಮುನ್ನ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ನಡೆಸಿದ ಸಚಿವ ಸಂಪುಟ ಸಭೆ ಅವಧಿ ಪೂರ್ವ ಚುನಾವಣೆ ಊಹಾಪೋಹಕ್ಕೆ ಕಾರಣವಾಗಿತ್ತು.

ಹೈದರಾಬಾದ್: ತೆಲಂಗಾಣದಲ್ಲಿ ಬೃಹತ್ ಸಾರ್ವಜನಿಕ ಸಮಾವೇಶಕ್ಕೂ ಮುನ್ನ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ನಡೆಸಿದ ಸಚಿವ ಸಂಪುಟ ಸಭೆ ಅವಧಿ ಪೂರ್ವ ಚುನಾವಣೆ ಊಹಾಪೋಹಕ್ಕೆ  ಕಾರಣವಾಗಿತ್ತು. 
ಈ ಬೆನ್ನಲ್ಲೇ ಕೆಸಿಆರ್ ರೈತರಿಗೆ ಬಂಪರ್ ಗಿಫ್ಟ್ ಗಳನ್ನು ನೀಡಿದ್ದು ರೈತರ ಖಾತೆಗೆ ನೇರವಾಗಿ ನಗದನ್ನು ವರ್ಗವಾಣೆ ಮಾಡುವ ರೈತು ಬಂಧು ಯೋಜನೆಯನ್ನು ಘೋಷಿಸಿದ್ದಾರೆ. ಈ ಯೋಜನೆಯಡಿಯಲ್ಲಿ ಪ್ರತಿ ರೈತನಿಗೆ ಪ್ರತಿ ಎಕರೆಗೆ 4000 ರೂಪಾಯಿ ಸಿಗಲಿದ್ದು, ರಾಬಿ ಸೀಸನ್​ ಗೂ ಮುನ್ನ ರಾಜ್ಯ ಸರ್ಕಾರ ರೈತರ ಖಾತೆಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡಬಹುದಾಗಿದೆ. 12,000 ಕೋಟಿ ರೂಪಾಯಿ ಅನುದಾನದ ಪೈಕಿ ಅರ್ಧದಷ್ಟು ಹಣ ಅಂದರೆ 6000 ಕೋಟಿ ರೂಪಾಯಿಯಷ್ಟು ಹಣ ಈಗಾಗಲೇ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಿದೆ. 
ಇದೇ ವೇಳೆ ಕೆಸಿಆರ್ ರೈತರಿಗಾಗಿ ವಿಮಾ ಯೋಜನೆಯನ್ನೂ ಘೋಷಿಸಿದ್ದು, ಇಂದು 2  ಲಕ್ಷದವರೆಗಿನ ಸಾಲ ಮನ್ನ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. 2014 ರ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳ ಪ್ರಕಾರ ಈಗಾಗಲೇ 1 ಲಕ್ಷದವರೆಗಿನ ಸಾಲ ಮನ್ನಾ ಮಾಡಿದ್ದಾರೆ. 
ಕೆಸಿಆರ್ ರೈತರ ಪರವಾದ, ಜನಪ್ರಿಯ ಯೋಜನೆಗಳನ್ನು ಘೋಷಿಸುತ್ತಿರುವುದು ತೆಲಂಗಾಣ ವಿಧಾನಸಭೆಯನ್ನು ವಿಸರ್ಜಿಸಿ ವರ್ಷಾಂತ್ಯಕ್ಕೆ ಅವಧಿಗೂ ಮುನ್ನವೇ ಚುನಾವಣೆ ಎದುರಿಸಲು ಹೂಡುತ್ತಿರುವ ತಂತ್ರ ಎಂದು ವಿಶ್ಲೇಷಿಸಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

SCROLL FOR NEXT