ಸಂಗ್ರಹ ಚಿತ್ರ 
ದೇಶ

ತೆಲಂಗಾಣ: 'ಅವಧಿ ಪೂರ್ವ ಚುನಾವಣೆಗೆ ಸಿದ್ಧರಾಗಿ', ಬಿಜೆಪಿ ಕಾರ್ಯಕರ್ತರಿಗೆ ಅಮಿತ್ ಶಾ ಸೂಚನೆ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೂಡ ಅವಧಿ ಪೂರ್ವ ಚುನಾವಣೆಗೆ ಸಿದ್ಧರಾಗುವಂತೆ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.

ಹೈದರಾಬಾದ್: ಅತ್ತ ಹೈದರಾಬಾದ್ ನಲ್ಲಿ ಸಿಎಂ ಕೆಸಿಆರ್ ಅವಧಿ ಪೂರ್ವ ಚುನಾವಣೆ ಘೋಷಣೆ ಮಾಡುವ ಕುರಿತು ಚಿಂತನೆಯಲ್ಲಿ ತೊಡಗಿರುವಂತೆಯೇ ಇತ್ತ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೂಡ ಅವಧಿ ಪೂರ್ವ ಚುನಾವಣೆಗೆ ಸಿದ್ಧರಾಗುವಂತೆ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಅಮಿತ್ ಶಾ ತೆಲಂಗಾಣ ಬಿಜೆಪಿ ಘಟಕಕ್ಕೆ ಮಾಹಿತಿ ನೀಡಿದ್ದು, ನವೆಂಬರ್​-ಡಿಸೆಂಬರ್​ಗೆ ಚುನಾವಣೆ ನಡೆಯುವ ಸಾಧ್ಯತೆಗಳಿದ್ದು, ಚುನಾವಣೆಗೆ ಸಿದ್ಧರಾಗಿ ಎಂದು ಸಂದೇಶ ನೀಡಿದ್ದಾರೆ. ಇತ್ತೀಚೆಗೆ ಮಂತ್ರಾಲಯಕ್ಕೆ ಭೇಟಿ ನೀಡಿದ್ದ ಅಮಿತ್​ ಶಾ ಅವರು, ಮಾರ್ಗಮಧ್ಯೆ ಶಂಶಾಬಾದ್​ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಮುಖಂಡ ಬಂಡಾರು ದತ್ತಾತ್ರೇಯ ಮತ್ತು ಪಕ್ಷದ ಇತರೆ ನಾಯಕರನ್ನು ಭೇಟಿ ಮಾಡಿ ಈ ವಿಚಾರ ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಈ ನಡುವೆ ಇದೇ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಂಡಾರು ದತ್ತಾತ್ರೆಯ ಅವರು, ಅವಧಿ ಪೂರ್ವ ಚುನಾವಣೆ ಕುರಿತು ರಾಷ್ಟ್ರಾಧ್ಯಕ್ಷರು ಮಾಹಿತಿ ನೀಡಿದ್ದಾರೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದ್ದು, ಯಾವುದೇ ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ.
ಇತ್ತ ನಿಜಾಮಬಾದ್​ ಶಾಸಕಿ ಹಾಗೂ ಕೆಸಿಆರ್​ ಪುತ್ರಿ ಕವಿತಾ, ರಾಜ್ಯದಲ್ಲಿ ವಿರೋಧ ಪಕ್ಷಗಳ ಸೊಲ್ಲೇ ಇಲ್ಲ. ಹಾಗೇನಾದರೂ ಇದ್ದರೆ ಅವರದ್ದು ಎರಡನೇ ಸ್ಥಾನ ಎಂದು ಹೇಳಿಕೆ ನೀಡಿದ್ದಾರೆ.  ನಾಲ್ಕು ವರ್ಷ ಮುಖ್ಯಮಂತ್ರಿ ಕಾರ್ಯನಿರ್ವಹಿಸಿರುವ ಕೆಸಿಆರ್​ ಅವರು, ರಾಜ್ಯದಲ್ಲಿನ ಜನರ ನಾಡಿ ಮಿಡಿತ ಅರಿಯಲು ಸಮೀಕ್ಷೆ ಮಾಡಿಸಿದ್ದಾರೆ ಎನ್ನಲಾಗಿದ್ದು, ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇಲ್ಲದಿರುವುದು ಮತ್ತು ಸಮೀಕ್ಷೆಯಲ್ಲಿ ಭಾರಿ ಪ್ರಮಾಣದ ಸೀಟು ಗೆಲ್ಲುವ ಮುನ್ಸೂಚನೆ ಸಿಕ್ಕಿದೆ ಎಂದು ಹೇಳಲಾಗಿದೆ.
ಇದೇ ಕಾರಣಕ್ಕೆ ಕೆಸಿಆರ್ ಅವಧಿ ಪೂರ್ವ ಚುನಾವಣೆಗೆ ಕರೆ ನೀಡುವ ಸಾಧ್ಯತೆ ಇದೆ ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT