ಹರಿನಾರಾಯಣ್ ರಾಜ್ ಭರ್ 
ದೇಶ

ಮಹಿಳೆಯರಂತೆ ಪುರುಷರಿಗೂ ರಾಷ್ಟ್ರೀಯ ಆಯೋಗ ಬೇಕು: ಬಿಜೆಪಿ ಸಂಸದ

ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಲೋಕಸಭಾ ಸದಸ್ಯರೊಬ್ಬರು ಪತ್ನಿಯಿಂದ ಪೀಡನೆಗೊಳಗಾದ ಪುರುಷರಿಗಾಗಿ ರಾಷ್ಟ್ರೀಯ ಪುರುಷರ ಆಯೋಗ ರಚನೆಯಾಗಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ನವದೆಹಲಿ: ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಲೋಕಸಭಾ ಸದಸ್ಯರೊಬ್ಬರು ಪತ್ನಿಯಿಂದ  ಪೀಡನೆಗೊಳಗಾದ ಪುರುಷರಿಗಾಗಿ ರಾಷ್ಟ್ರೀಯ ಪುರುಷರ ಆಯೋಗ ರಚನೆಯಾಗಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಉತ್ತರ ಪ್ರದೇಶದ  ಬಿಜೆಪಿ ಸಂಸದ ಹರಿನಾರಾಯಣ್ ರಾಜ್ ಭರ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು ಪುರುಷರ ಶಾಸನಬದ್ಧ ಸಂಸ್ಥೆ ಸಹ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಮನಾದ ಸ್ಥಾನ ಹೊಂದಿರಬೇಕು ಎಂದು ಒತ್ತಾಯಿಸಿದ್ದಾರೆ.
"ರಾಷ್ಟ್ರೀಯ ಮಹಿಳಾ ಆಯೋಗದಂತೆಯೇ ಪುರುಷರ ಆಯೋಗವನ್ನೂ ರಚಿಸಬೇಕು.ನೊಂದ ಪುರುಷರಿಗೆ ಸಹ ಒಂದು ವೇದಿಕೆಯ ಅಗತ್ಯವಿದೆ. ಪ್ರಸ್ತುತ ಸಮಯದಲ್ಲಿ, ಪುರುಷರು ತಮ್ಮ ಹೆಂಡತಿಯರ ಬಳಿ ಎದುರಿಸುವ ಕಷ್ಟಗಳಿಗೆ ಪರಿಹಾರ ಸೂಚಿಸಲು ಯಾವುದೇ ಶಾಸನಬದ್ದ ಸಂಸ್ಥೆಗಳಿಲ್ಲ." ಎ ಎನ್ ಐಗೆ ನಿಡಿದ ಸಂದರ್ಶನದಲ್ಲಿ ರಾಜ್ ಭರ್ ಹೇಳಿದ್ದಾರೆ.
ಕಳೆದ ತಿಂಗಳು ನಡೆದ ಮಾನ್ಸೂನ್ ಅಧಿವೇಶನದಲ್ಲಿ ರಾಜ್ ಭರ್ ಈ ಪ್ರಸ್ತಾಪವನ್ನಿತ್ತಿದ್ದರು. ಇದರ ಬಳಿಕ ಅವರು ದೇಶಾದ್ಯಂತದ ಪುರುಷ ಸಮುದಾಯದ ವ್ಯಾಪಕ ಬೆಂಬಲ ಗಳಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.
 "ನಾನು ದೇಶದ ವಿವಿಧ ಭಾಗಗಳಿಂದ 5000 ಕ್ಕಿಂತ ಹೆಚ್ಚು ಸಂದೇಶಗಳನ್ನು ಪಡೆದಿದ್ದೇನೆ, ವಿದೇಶದಲ್ಲಿ ನೆಲೆಸಿದವರಲ್ಲಿ ಸಹ ಕೆಲವರು  ಕಲ್ಪನೆಯನ್ನು ಬೆಂಬಲಿಸಿದರು ಮತ್ತು ಶಾಸನಬದ್ಧ ಆಯೋಗ ರಚನೆಗೆ ಸೂಚಿಸಿದ್ದಾರೆ" ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT