ಸಂಗ್ರಹ ಚಿತ್ರ 
ದೇಶ

ಕೇರಳ: ಪ್ರವಾಹದ ಬಳಿಕ ಈಗ ಸಾಂಕ್ರಾಮಿಕ ರೋಗ ಭೀತಿ, ನೀರಿನಿಂದ ಹಬ್ಬಿದ ರೋಗಕ್ಕೆ 10 ಸಾವು!

ಶತಮಾನದ ಭೀಕರ ಪ್ರವಾಹಕ್ಕೆ ತುತ್ತಾಗಿ ತತ್ತರಿಸಿ ಹೋಗಿದ್ದ ಕೇರಳದಲ್ಲಿ ಈಗ ಸಾಂಕ್ರಾಮಿಕ ರೋಗಗಳ ಭೀತಿ ಕಾಡುತ್ತಿದ್ದು, ನೀರಿನಿಂದ ಹಬ್ಬಿದ ವಿಚಿತ್ರ ರೋಗದಿಂದಾಗಿ ಈ ವರೆಗೂ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ತಿರುವನಂತಪುರಂ: ಶತಮಾನದ ಭೀಕರ ಪ್ರವಾಹಕ್ಕೆ ತುತ್ತಾಗಿ ತತ್ತರಿಸಿ ಹೋಗಿದ್ದ ಕೇರಳದಲ್ಲಿ ಈಗ ಸಾಂಕ್ರಾಮಿಕ ರೋಗಗಳ ಭೀತಿ ಕಾಡುತ್ತಿದ್ದು, ನೀರಿನಿಂದ ಹಬ್ಬಿದ ವಿಚಿತ್ರ ರೋಗದಿಂದಾಗಿ ಈ ವರೆಗೂ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಕೇವಲ 5 ದಿನಗಳ ಅವಧಿಯಲ್ಲಿ ಅಂದರೆ ಆಗಸ್ಟ್ 29ರಿಂದ ಈ ವರೆಗೂ ಕೇರಳದಲ್ಲಿ 10 ಮಂದಿ ಸಾವನ್ನಪ್ಪಿದ್ದು, ಸಾವಿಗೆ ನೀರಿನಿಂದ ಹಬ್ಬಿದ ಸಾಂಕ್ರಾಮಿಕ ರೋಗವೇ ಕಾರಣ ಎಂದು ವೈದ್ಯರು ಶಂಕಿಸಿದ್ದಾರೆ. ಈ ಹಿನ್ನಲೆಯಲ್ಲಿ ಕೇರಳದಲ್ಲಿ ಪ್ರವಾಹದ ಬಳಿಕ ಸಾಂಕ್ರಾಮಿಕ ರೋಗಗಳ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಗ್ರಾಮಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡುವಂತೆ, ಶುದ್ಧ ನೀರನ್ನು ಮಾತ್ರ ಕುಡಿಯುವಂತೆ ಜನರಿಗೆ ಸಲಹೆ ನೀಡಿದ್ದಾರೆ. 
ಅಲ್ಲದೆ ತುರ್ತು ಸಂದರ್ಭಗಳಿಗೆ ಸಿದ್ಧರಾಗಿರುವಂತೆ ಸರ್ಕಾರಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದ್ದು, ಸರ್ವ ಸನ್ನದ್ಧ ರೀತಿಯಲ್ಲಿ ತಯಾರಿಗಿರುವಂತೆ ವೈದ್ಯರಿಗೆ ಸೂಚನೆ ನೀಡಲಾಗಿದೆ. ಕೆಲ ವೈದ್ಯರು ಅಭಿಪ್ರಾಯ ಪಟ್ಟಿರುವಂತೆ ಪ್ರಸ್ತುತ ಕೇರಳವನ್ನು ಆವರಿಸಿರುವ ಶಂಕಿತ ಜ್ವರವನ್ನು ಲೆಪ್ಟೊಸ್ಪೈರೋಸಿಸ್ (ಇಲಿ ಜ್ವರ) (ನಾಯಿ, ಬೆಕ್ಕು ಸೇರಿದಂತೆ ಮತ್ತಿತರ ಸಸ್ತನಿಗಳಿಗೆ ಬರುವ ಮತ್ತು ಮನುಷ್ಯರಿಗೂ ಹರಡಬಹುದಾದ ಒಂದು ಅಂಟುರೋಗ) ಎಂದು ಶಂಕಿಸಲಾಗಿದೆ. 
ಅಧಿಕಾರಿಗಳು ನೀಡಿರುವ ಮಾಹಿತಿಯನ್ವಯ ಈ ಶಂಕಿತ ಜ್ವರಕ್ಕೆ ಈಗಾಗಲೇ 10 ಮಂದಿ ಬಲಿಯಾಗಿದ್ದು, ಕೇರಳದಲ್ಲಿ ಸುಮಾರು 350 ಮಂದಿಯಲ್ಲಿ ಈ ಜ್ವರದ ಲಕ್ಷಣಗಳು ಕಾಣಿಸಿಕೊಂಡಿವೆ. ಈ ಪೈಕಿ 150 ರಕ್ತದ ಮಾದರಿಯಲ್ಲಿ ಜ್ವರ ಪತ್ತೆಯಾಗಿದ್ದು, ಕಲ್ಲಿಕೋಟೆ ಮತ್ತು ಮಳಪ್ಪುರಂನಲ್ಲಿ ಶಂಕಿತ ಜ್ವರದ ರೋಗಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT