ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 
ದೇಶ

ಅಲಹಾಬಾದಿನಲ್ಲಿ 10 ರೂ. ಗೆ 'ಯೋಗಿ ಥಾಲಿ'

ಉತ್ತರ ಪ್ರದೇಶದ ಅಲಹಾಬಾದಿನಲ್ಲಿ 10 ರೂಪಾಯಿಗೆ ಕಡಿಮೆ ದರದಲ್ಲಿ ಊಟ , ಉಪಹಾರ ಒದಗಿಸುವ ಯೋಗಿ ಥಾಲಿ ಯೋಜನೆಗೆ ಮೇಯರ್ ಅಭಿಲಾಷ್ ಗುಪ್ತ ಚಾಲನೆ ನೀಡಿದ್ದಾರೆ.

ಅಲಹಾಬಾದ್: ಉತ್ತರ ಪ್ರದೇಶದ ಅಲಹಾಬಾದಿನಲ್ಲಿ 10 ರೂಪಾಯಿಗೆ ಕಡಿಮೆ ದರದಲ್ಲಿ ಊಟ, ಉಪಹಾರ ಒದಗಿಸುವ  ಯೋಗಿ ಥಾಲಿ ಯೋಜನೆಗೆ ಮೇಯರ್ ಅಭಿಲಾಷ್ ಗುಪ್ತ  ಚಾಲನೆ ನೀಡಿದ್ದಾರೆ.

ಇತರರ ಸಹಯೋಗದೊಂದಿಗೆ ಖಾಸಗಿ  ವ್ಯಕ್ತಿ ಈ ವ್ಯವಸ್ಥೆಯನ್ನು ಆರಂಭಿಸಿದ್ದಾರೆ. ಈ ಯೋಜನೆ ಜಾರಿಗೊಳಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಭಿಲಾಷ್ ಗುಪ್ತಾ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಸರಲ್ಲಿ ಇದನ್ನು ಸ್ಥಾಪಿಸಲಾಗಿದ್ದು, ಬಡವರಿಗೆ 10 ರೂ. ನಲ್ಲಿ ಊಟ ಒದಗಿಸಲಾಗುತ್ತಿದೆ. ಇದರಿಂದ ಸಾಕಷ್ಟು ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಥಾಲಿ ಯೋಜನೆ ಆರಂಭಿಸಿರುವ ಖಾಸಗಿ ವ್ಯಕ್ತಿ ದಿಲೀಪ್ ಮಾತನಾಡಿ, ಯಾರೊಬ್ಬರು ಹೊಟ್ಟೆ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಇದನ್ನು  ಸ್ಥಾಪಿಸಲಾಗಿದೆ. ಜನರಿಗಾಗಿ ಸೇವೆ ಮಾಡುತ್ತಿರುವ ಮುಖ್ಯಮಂತ್ರಿ ಅವರ ಹೆಸರನ್ನೆ ಇಡಲಾಗಿದೆ ಎಂದು ಹೇಳಿದರು.

ಅಲಹಾಬಾದಿನ ಅಟ್ಟರ್ಸುನಿಯಾ ಪ್ರದೇಶದಲ್ಲಿ ಯೋಗಿ ಥಾಲಿ ಯೋಜನೆ ಕಾರ್ಯಾರಂಭವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ