ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 
ದೇಶ

ಅಲಹಾಬಾದಿನಲ್ಲಿ 10 ರೂ. ಗೆ 'ಯೋಗಿ ಥಾಲಿ'

ಉತ್ತರ ಪ್ರದೇಶದ ಅಲಹಾಬಾದಿನಲ್ಲಿ 10 ರೂಪಾಯಿಗೆ ಕಡಿಮೆ ದರದಲ್ಲಿ ಊಟ , ಉಪಹಾರ ಒದಗಿಸುವ ಯೋಗಿ ಥಾಲಿ ಯೋಜನೆಗೆ ಮೇಯರ್ ಅಭಿಲಾಷ್ ಗುಪ್ತ ಚಾಲನೆ ನೀಡಿದ್ದಾರೆ.

ಅಲಹಾಬಾದ್: ಉತ್ತರ ಪ್ರದೇಶದ ಅಲಹಾಬಾದಿನಲ್ಲಿ 10 ರೂಪಾಯಿಗೆ ಕಡಿಮೆ ದರದಲ್ಲಿ ಊಟ, ಉಪಹಾರ ಒದಗಿಸುವ  ಯೋಗಿ ಥಾಲಿ ಯೋಜನೆಗೆ ಮೇಯರ್ ಅಭಿಲಾಷ್ ಗುಪ್ತ  ಚಾಲನೆ ನೀಡಿದ್ದಾರೆ.

ಇತರರ ಸಹಯೋಗದೊಂದಿಗೆ ಖಾಸಗಿ  ವ್ಯಕ್ತಿ ಈ ವ್ಯವಸ್ಥೆಯನ್ನು ಆರಂಭಿಸಿದ್ದಾರೆ. ಈ ಯೋಜನೆ ಜಾರಿಗೊಳಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಭಿಲಾಷ್ ಗುಪ್ತಾ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಸರಲ್ಲಿ ಇದನ್ನು ಸ್ಥಾಪಿಸಲಾಗಿದ್ದು, ಬಡವರಿಗೆ 10 ರೂ. ನಲ್ಲಿ ಊಟ ಒದಗಿಸಲಾಗುತ್ತಿದೆ. ಇದರಿಂದ ಸಾಕಷ್ಟು ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಥಾಲಿ ಯೋಜನೆ ಆರಂಭಿಸಿರುವ ಖಾಸಗಿ ವ್ಯಕ್ತಿ ದಿಲೀಪ್ ಮಾತನಾಡಿ, ಯಾರೊಬ್ಬರು ಹೊಟ್ಟೆ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಇದನ್ನು  ಸ್ಥಾಪಿಸಲಾಗಿದೆ. ಜನರಿಗಾಗಿ ಸೇವೆ ಮಾಡುತ್ತಿರುವ ಮುಖ್ಯಮಂತ್ರಿ ಅವರ ಹೆಸರನ್ನೆ ಇಡಲಾಗಿದೆ ಎಂದು ಹೇಳಿದರು.

ಅಲಹಾಬಾದಿನ ಅಟ್ಟರ್ಸುನಿಯಾ ಪ್ರದೇಶದಲ್ಲಿ ಯೋಗಿ ಥಾಲಿ ಯೋಜನೆ ಕಾರ್ಯಾರಂಭವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!