ಸಂಗ್ರಹ ಚಿತ್ರ 
ದೇಶ

ಪ್ರಿಯಕರನೊಡನೆ ವಧು ಪರಾರಿ, ಎಐಎಡಿಎಂಕೆ ಶಾಸಕನ ಮದುವೆ ರದ್ದು!

ಮದುವೆಯಾಗಬೇಕಾಗಿದ್ದ ವಧು ನಾಪತ್ತೆಯಾದ ಹಿನ್ನೆಲೆಯಲ್ಲಿ ಎಐಎಡಿಎಂಕೆ ಶಾಸಕರ ವಿವಾಹ ರದ್ದಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಈರೋಡ್: ಮದುವೆಯಾಗಬೇಕಾಗಿದ್ದ ವಧು ನಾಪತ್ತೆಯಾದ ಹಿನ್ನೆಲೆಯಲ್ಲಿ ಎಐಎಡಿಎಂಕೆ ಶಾಸಕರ ವಿವಾಹ ರದ್ದಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ತಮಿಳುನಾಡಿನ ಭವಾನಿಸಾಗರದ ಎಐಡಿಎಂಕೆ ಶಾಸಕ ಈಶ್ವರನ್ (43),ವಿವಾಹ ರದ್ದಾಗಿದೆ. ಸೆಪ್ಟೆಂಬರ್ 12ರಂದು ಎಂಸಿಎ ಪದವೀಧರೆ ಆರ್. ಸಂದ್ಯಾ (23) ಜತೆಗೆ ಮದುವೆ ನಿಶ್ಚಯವಾಗಿದ್ದು ಪ್ರಸಿದ್ದ ಬನ್ನಾರಿ ಅಮ್ಮನ್ ದೇವಸ್ಥಾನದಲ್ಲಿ ಮದುವೆ ಕಾರ್ಯಕ್ರಮವಿತ್ತು.
ಆದರೆ ವಧು ಸಂದ್ಯಾ ಬೇರೊಬ್ಬನನ್ನು ಪ್ರಿತಿಸುತ್ತಿದ್ದಳೆನ್ನಲಾಗಿದ್ದು ಆಕೆ ತನ್ನ ಪ್ರಿಯಕರನೊಡನೆ ಶನಿವಾರ (ಸೆಪ್ಟೆಂಬರ್ 1) ಮನೆಯಿಂದ ಪಲಾಯನ ಮಾಡಿದ್ದಾಳೆ.
ಶನಿವಾರ ಮಧ್ಯಾಹ್ನ  ಸತ್ಯಮಂಗಲಂನಲ್ಲಿರುವ ಸಹೋದರಿ ಮನೆಗೆ ಹೋಗುತ್ತೇನೆಂದು ಹೇಳಿ ಹೊಗಿದ್ದ ಸಂದ್ಯಾ ಮತ್ತೆ ಹಿಂತಿರುಗಲಿಲ್ಲ.ಮಗಳ ಮೊಬೈಲ್ ಸಹ ಸ್ವಿಚ್ ಆಫ್ ಆಗಿತ್ತು. ಇದರಿಂದ ಆತಂಕಗೊಂಡ ಪೋಷಕರು ಕಡತೂರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ.
ವಿಘ್ನೇಶ್  ಎನ್ನುವವನನ್ನು ಸಂದ್ಯಾ ಪ್ರೀತಿಸುತ್ತಿದ್ದಳು ಎನ್ನಲಾಗಿದ್ದು ಆತನೊಡನೆ ಓಡಿ ಹೋಗಿರುವ ಸಾಧ್ಯತೆ ಇದೆ ಎಂದು ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.
ಏನಾದರಾಗಲಿ ಮುಖ್ಯಮಂತ್ರಿ ಪಳನಿಸ್ವಾಮಿ, ಉಪ ಮುಖ್ಯಮಂತ್ರಿ ಪನ್ನೀರ ಸೆಲ್ವಂ, ಸಭಾಪತಿ ಪಿ ಧನಪಾಲ್  ಸೇರಿ ಅನೇಕ ಗಣ್ಯರ ಸಮ್ಮುಖದಲ್ಲಿ ನೆರವೇರಬೇಕಾಗಿದ್ದ ಶಾಸಕರ ವಿವಾಹ ರದ್ದಾಗಿರುವ ಕಾರಣ ಶಾಸಕ ಈಶ್ವರನ್ ತೀವ್ರ ಮುಜುಗರಕ್ಕೀಡಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

LPG Crisis: ಹೃದಯ ಶ್ರೀಮಂತಿಕೆ ಮೆರೆದ ಧ್ರುವ ಸರ್ಜಾ; ಆಟೋ ಚಾಲಕರಿಗೆ 25 ಲಕ್ಷ ರೂ. ನೆರವು - ಸರ್ಕಾರಕ್ಕೆ ಆಕ್ಷನ್‌ ಪ್ರಿನ್ಸ್‌ ಹೇಳಿದ್ದೇನು?

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

SIR ಗೆ ಆಕ್ಷೇಪ; ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!

ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವು

SCROLL FOR NEXT