ಸಂಗ್ರಹ ಚಿತ್ರ 
ದೇಶ

ಪ್ರಿಯಕರನೊಡನೆ ವಧು ಪರಾರಿ, ಎಐಎಡಿಎಂಕೆ ಶಾಸಕನ ಮದುವೆ ರದ್ದು!

ಮದುವೆಯಾಗಬೇಕಾಗಿದ್ದ ವಧು ನಾಪತ್ತೆಯಾದ ಹಿನ್ನೆಲೆಯಲ್ಲಿ ಎಐಎಡಿಎಂಕೆ ಶಾಸಕರ ವಿವಾಹ ರದ್ದಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಈರೋಡ್: ಮದುವೆಯಾಗಬೇಕಾಗಿದ್ದ ವಧು ನಾಪತ್ತೆಯಾದ ಹಿನ್ನೆಲೆಯಲ್ಲಿ ಎಐಎಡಿಎಂಕೆ ಶಾಸಕರ ವಿವಾಹ ರದ್ದಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ತಮಿಳುನಾಡಿನ ಭವಾನಿಸಾಗರದ ಎಐಡಿಎಂಕೆ ಶಾಸಕ ಈಶ್ವರನ್ (43),ವಿವಾಹ ರದ್ದಾಗಿದೆ. ಸೆಪ್ಟೆಂಬರ್ 12ರಂದು ಎಂಸಿಎ ಪದವೀಧರೆ ಆರ್. ಸಂದ್ಯಾ (23) ಜತೆಗೆ ಮದುವೆ ನಿಶ್ಚಯವಾಗಿದ್ದು ಪ್ರಸಿದ್ದ ಬನ್ನಾರಿ ಅಮ್ಮನ್ ದೇವಸ್ಥಾನದಲ್ಲಿ ಮದುವೆ ಕಾರ್ಯಕ್ರಮವಿತ್ತು.
ಆದರೆ ವಧು ಸಂದ್ಯಾ ಬೇರೊಬ್ಬನನ್ನು ಪ್ರಿತಿಸುತ್ತಿದ್ದಳೆನ್ನಲಾಗಿದ್ದು ಆಕೆ ತನ್ನ ಪ್ರಿಯಕರನೊಡನೆ ಶನಿವಾರ (ಸೆಪ್ಟೆಂಬರ್ 1) ಮನೆಯಿಂದ ಪಲಾಯನ ಮಾಡಿದ್ದಾಳೆ.
ಶನಿವಾರ ಮಧ್ಯಾಹ್ನ  ಸತ್ಯಮಂಗಲಂನಲ್ಲಿರುವ ಸಹೋದರಿ ಮನೆಗೆ ಹೋಗುತ್ತೇನೆಂದು ಹೇಳಿ ಹೊಗಿದ್ದ ಸಂದ್ಯಾ ಮತ್ತೆ ಹಿಂತಿರುಗಲಿಲ್ಲ.ಮಗಳ ಮೊಬೈಲ್ ಸಹ ಸ್ವಿಚ್ ಆಫ್ ಆಗಿತ್ತು. ಇದರಿಂದ ಆತಂಕಗೊಂಡ ಪೋಷಕರು ಕಡತೂರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ.
ವಿಘ್ನೇಶ್  ಎನ್ನುವವನನ್ನು ಸಂದ್ಯಾ ಪ್ರೀತಿಸುತ್ತಿದ್ದಳು ಎನ್ನಲಾಗಿದ್ದು ಆತನೊಡನೆ ಓಡಿ ಹೋಗಿರುವ ಸಾಧ್ಯತೆ ಇದೆ ಎಂದು ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.
ಏನಾದರಾಗಲಿ ಮುಖ್ಯಮಂತ್ರಿ ಪಳನಿಸ್ವಾಮಿ, ಉಪ ಮುಖ್ಯಮಂತ್ರಿ ಪನ್ನೀರ ಸೆಲ್ವಂ, ಸಭಾಪತಿ ಪಿ ಧನಪಾಲ್  ಸೇರಿ ಅನೇಕ ಗಣ್ಯರ ಸಮ್ಮುಖದಲ್ಲಿ ನೆರವೇರಬೇಕಾಗಿದ್ದ ಶಾಸಕರ ವಿವಾಹ ರದ್ದಾಗಿರುವ ಕಾರಣ ಶಾಸಕ ಈಶ್ವರನ್ ತೀವ್ರ ಮುಜುಗರಕ್ಕೀಡಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT