ತೆಲುಗು ಕವಿ ವರವರ ರಾವ್ 
ದೇಶ

ಭಿನ್ನಮತೀಯರನ್ನು ತಡೆಯುತ್ತಿಲ್ಲ, ಸಮಾಜವನ್ನು ಅವ್ಯವಸ್ಥೆಯಿಂದ ರಕ್ಷಿಸುತ್ತಿದ್ದೇವೆ; ಸುಪ್ರೀಂ ಕೋರ್ಟ್ ಗೆ ಪುಣೆ ಪೊಲೀಸರು

ಭೀಮಾ-ಕೊರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪೊಲೀಸರು ಬಂಧಿಸಿದ್ದ ಐವರು ...

ನವದೆಹಲಿ: ಭೀಮಾ-ಕೊರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪೊಲೀಸರು ಬಂಧಿಸಿದ್ದ ಐವರು ಕಾರ್ಯಕರ್ತರು ರಾಜಕೀಯ ಮತ್ತು ಇತರ ಸಿದ್ಧಾಂತಗಳಲ್ಲಿ ಭಿನ್ನಮತ ಹೊಂದಿದ್ದರು ಎಂದು ಮಹಾರಾಷ್ಟ್ರ ಪೊಲೀಸರು ಸುಪ್ರೀಂ ಕೋರ್ಟ್ ನಲ್ಲಿ ತೀವ್ರವಾಗಿ ಖಂಡಿಸಿದ್ದಾರೆ.

ಈ ಸಂಬಂಧ ನ್ಯಾಯಾಲಯದಲ್ಲಿ ಅಫಿಡವಿಟ್ಟು ಸಲ್ಲಿಸಿರುವ ಪುಣೆ ಪೊಲೀಸರು, ಈ ಐವರು ಹಿಂಸಾಕೃತ್ಯಕ್ಕೆ ಯೋಜನೆ ರೂಪಿಸಿ ತಯಾರಿ ನಡೆಸಿದ್ದು ಮಾತ್ರವಲ್ಲದೆ ಅತಿದೊಡ್ಡ ಮಟ್ಟದಲ್ಲಿ ಹಿಂಸಾಚಾರ ಸೃಷ್ಟಿಸಲು ಯೋಜನೆ ನಡೆಸುತ್ತಿದ್ದರು. ಈ ಮೂಲಕ ಸಮಾಜದ ಆಸ್ತಿಪಾಸ್ತಿಗಳನ್ನು ನಾಶಮಾಡಿ ಶಾಂತಿ ಕೆಡಿಸಲು ನೋಡುತ್ತಿದ್ದರು ಎಂದಿದ್ದಾರೆ.

ಪುಣೆಯ ಪೊಲೀಸ್ ಆಯುಕ್ತರು ಸುಪ್ರೀಂ ಕೋರ್ಟ್ ಗೆ ಈ ವಿವರ ನೀಡಿ ಅಫಿಡವಿಟ್ಟು ಸಲ್ಲಿಸಿದ್ದು ಈ ಕಾರ್ಯಕರ್ತರ ವಿರುದ್ಧ ದಾಖಲಿಸಿರುವ ಎಫ್ಐಆರ್ ನಿಂದ ಇವರು ಮಾಡಿರುವ ತೀವ್ರ ಅಪರಾಧಗಳ ಗಂಭೀರತೆಯನ್ನು ಪರಿಗಣಿಸಬಹುದಾಗಿದೆ ಎಂದಿದ್ದಾರೆ.

ಈ ಕಾರ್ಯಕರ್ತರು ಹಿಂಸೆ ನಡೆಸಲು, ಶತ್ರುಗಳ ವಿರುದ್ಧ ಯೋಜಿತ ಹೊಂಚು ದಾಳಿಯನ್ನು ಮತ್ತು  ದಂಗೆಯನ್ನು ನಡೆಸಲು ಯೋಜಿಸುತ್ತಿದ್ದರು ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT