ಸುಬ್ರಮಣಿಯನ್ ಸ್ವಾಮಿ 
ದೇಶ

ಸಲಿಂಗಕಾಮದಿಂದ ಎಚ್ಐವಿ ಹೆಚ್ಚಾಗುತ್ತಾ; ಸೆಕ್ಷನ್ 377 ಬಗ್ಗೆ ಸುಬ್ರಮಣಿಯನ್ ಸ್ವಾಮಿ ಹೇಳಿದ್ದೇನು!

ಸಲಿಂಗಕಾಮ ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು...

ನವದೆಹಲಿ: ಸಲಿಂಗಕಾಮ ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ಸಲಿಂಗಕಾಮದಿಂದ ಎಚ್ಐವಿ ಹೆಚ್ಚಾಗುತ್ತದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 
ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅಂತಿಮವಲ್ಲ. ತೀರ್ಪನ್ನು ಪ್ರಶ್ನಿಸಿ 7 ಮಂದಿ ನ್ಯಾಯಾಧೀಶರ ಪೀಠದಲ್ಲಿ ಮೇಲ್ಮನವಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶವಿದೆ. ಆದರೆ ಈ ತೀರ್ಪಿನಿಂದ ದೇಶದಲ್ಲಿ ಲೈಂಗಿಕ ಆರೋಗ್ಯಕ್ಕೆ ಸಂಬಂಧಿಸಿದ ರೋಗಗಳ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಎಂದರು. 
ಸಲಿಂಗಕಾಮ ಎನ್ನುವುದು ಅನುವಂಶೀಯ ಅಸ್ವಸ್ಥತೆ. ಹೀಗಾಗಿ ಈ ವ್ಯಕ್ತಿತ್ವ ಹೊಂದಿರುವವರನ್ನು ಸಾಮಾನ್ಯ ಲೈಂಗಿಕ ವರ್ತನೆ ಹೊಂದಿರುವ ವ್ಯಕ್ತಿಗಳ ಜೊತೆ ಹೋಲಿಕೆ ಮಾಡಲು ಬರುವುದಿಲ್ಲ. ಈ ಕುರಿತು ವೈದ್ಯಕೀಯ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆ ನಡೆಯಬೇಕಿದೆ ಎಂದರು. 
ಅಮೆರಿಕ ದೇಶದಲ್ಲಿರುವ ಸಂಸ್ಕೃತಿ ನಮ್ಮ ದೇಶದಲ್ಲೂ ಹೆಚ್ಚಾಗುವ ಸಂಭವವಿದ್ದು ಇದರ ಹಿಂದೆ ಸಾಕಷ್ಟು ಹಣದಸ ಹರಿವು ಇದೆ. ಇನ್ನು ಮುಂದೆ ಸಲಿಂಗಕಾಮದ ಬಾರ್ ಗಳು ಆರಂಭವಾಗಬಹುದು. ಇದು ದೇಶದ ಭದ್ರತೆಗೆ ಮಾರಕವಾಗಬಹುದು ಎಂದು ಅಭಿಪ್ರಾಯಪಟ್ಟರು. 
ನನಗೆ ಗೊತ್ತಿದೆ ಹಲವರು ನ್ಯಾಯಾಧೀಶರು ಸಲಿಂಗಕಾಮಿಗಳಾಗಿದ್ದಾರೆ. ಅಷ್ಟೇ ಅಲ್ಲದೇ ಭವಿಷ್ಯದಲ್ಲಿ ಶಿಶುಕಾಮಿಗಳ ಸಂಖ್ಯೆ ಹೆಚ್ಚಾಗಬಹುದು ಎಂಬ ಆತಂಕವನ್ನು ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT