ಸುಬ್ರಮಣಿಯನ್ ಸ್ವಾಮಿ 
ದೇಶ

ಸಲಿಂಗಕಾಮದಿಂದ ಎಚ್ಐವಿ ಹೆಚ್ಚಾಗುತ್ತಾ; ಸೆಕ್ಷನ್ 377 ಬಗ್ಗೆ ಸುಬ್ರಮಣಿಯನ್ ಸ್ವಾಮಿ ಹೇಳಿದ್ದೇನು!

ಸಲಿಂಗಕಾಮ ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು...

ನವದೆಹಲಿ: ಸಲಿಂಗಕಾಮ ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ಸಲಿಂಗಕಾಮದಿಂದ ಎಚ್ಐವಿ ಹೆಚ್ಚಾಗುತ್ತದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 
ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅಂತಿಮವಲ್ಲ. ತೀರ್ಪನ್ನು ಪ್ರಶ್ನಿಸಿ 7 ಮಂದಿ ನ್ಯಾಯಾಧೀಶರ ಪೀಠದಲ್ಲಿ ಮೇಲ್ಮನವಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶವಿದೆ. ಆದರೆ ಈ ತೀರ್ಪಿನಿಂದ ದೇಶದಲ್ಲಿ ಲೈಂಗಿಕ ಆರೋಗ್ಯಕ್ಕೆ ಸಂಬಂಧಿಸಿದ ರೋಗಗಳ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಎಂದರು. 
ಸಲಿಂಗಕಾಮ ಎನ್ನುವುದು ಅನುವಂಶೀಯ ಅಸ್ವಸ್ಥತೆ. ಹೀಗಾಗಿ ಈ ವ್ಯಕ್ತಿತ್ವ ಹೊಂದಿರುವವರನ್ನು ಸಾಮಾನ್ಯ ಲೈಂಗಿಕ ವರ್ತನೆ ಹೊಂದಿರುವ ವ್ಯಕ್ತಿಗಳ ಜೊತೆ ಹೋಲಿಕೆ ಮಾಡಲು ಬರುವುದಿಲ್ಲ. ಈ ಕುರಿತು ವೈದ್ಯಕೀಯ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆ ನಡೆಯಬೇಕಿದೆ ಎಂದರು. 
ಅಮೆರಿಕ ದೇಶದಲ್ಲಿರುವ ಸಂಸ್ಕೃತಿ ನಮ್ಮ ದೇಶದಲ್ಲೂ ಹೆಚ್ಚಾಗುವ ಸಂಭವವಿದ್ದು ಇದರ ಹಿಂದೆ ಸಾಕಷ್ಟು ಹಣದಸ ಹರಿವು ಇದೆ. ಇನ್ನು ಮುಂದೆ ಸಲಿಂಗಕಾಮದ ಬಾರ್ ಗಳು ಆರಂಭವಾಗಬಹುದು. ಇದು ದೇಶದ ಭದ್ರತೆಗೆ ಮಾರಕವಾಗಬಹುದು ಎಂದು ಅಭಿಪ್ರಾಯಪಟ್ಟರು. 
ನನಗೆ ಗೊತ್ತಿದೆ ಹಲವರು ನ್ಯಾಯಾಧೀಶರು ಸಲಿಂಗಕಾಮಿಗಳಾಗಿದ್ದಾರೆ. ಅಷ್ಟೇ ಅಲ್ಲದೇ ಭವಿಷ್ಯದಲ್ಲಿ ಶಿಶುಕಾಮಿಗಳ ಸಂಖ್ಯೆ ಹೆಚ್ಚಾಗಬಹುದು ಎಂಬ ಆತಂಕವನ್ನು ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT