ನರೇಂದ್ರ ದಾಬೋಲ್ಕರ್ 
ದೇಶ

ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣ: ಗೌರಿ ಲಂಕೇಶ್ ಹಂತಕರನ್ನು ವಶಕ್ಕೆ ಪಡೆದ ಸಿಬಿಐ

ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆಯನ್ನು ...

ಮುಂಬಯಿ: ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆಯನ್ನು ಸಿಬಿಐ ವಶಕ್ಕೆ ತೆಗೆದುಕೊಂಡಿದೆ.
ದಾಬೋಲ್ಕರ್ ಕೊಲೆ ಪ್ರಕರಣದಲ್ಲಿ ಕಾಳೆ ಮಾಸ್ಟರ್ ಮೈಂಡ್ ಆಗಿರಬಹುದೆಂದು ಸಿಬಿಐ ಅಧಿಕಾರಿಗಳು ಶಂಕಿಸಿದ್ದಾರೆ. 
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಳೆಯನ್ನು ಕರ್ನಾಟಕ ವಿಶೇಷ ತನಿಖಾ ದಳ ಪೋಲೀಸರು ಮೇ ತಿಂಗಳಲ್ಲಿ ಬಂಧಿಸಿದ್ದರು, ಕಾಳೆಯನ್ನು ವಶಕ್ಕೆ ಪಡೆದಿರುವ ಸಿಬಿಐ ಮಹಾರಾಷ್ಟ್ರದ  ಪುಣೆಯ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು.
2013 ರ ಆಗಸ್ಟ್ 20 ರಂದು  ದಾಬೋಲ್ಕರ್ ಅವರನ್ನು ಪುಣೆಯಲ್ಲಿ ಕೊಲ್ಲಲಾಗಿತ್ತು. ಕಾಳೆಯನ್ನು ವಿಚಾರಣೆ ನಡೆಸುವಾಗ ದಾಬೋಲ್ಕರ್ ಹತ್ಯೆ ಪ್ರಕರಣದಲ್ಲಿ ಆತನ ಕೈವಾಡವಿರುವುದಾಗಿ ಅಧಿಕಾರಿಗಳು ತಿಳಿಸಿದ್ದರು,
ಕಾಳೆ ಮತ್ತು ಸಚಿವ್ ಅಂಡುರೆ ದಾಬೋಲ್ಕರ್ ಕೊಲೆ ಪ್ರಕರಣದಲ್ಲಿ ಪ್ರಮುಖ ಶೂಟರ್ ಗಳಾಗಿದ್ದರು ಎಂದು ಆರೋಪಿಸಲಾಗಿದ್ದು, ಈ ಇಬ್ಬರು ಔರಂಗಬಾದ್ ಜಿಲ್ಲೆಯ ಲಾಡ್ಜ್ ವೊಂದರಲ್ಲಿ  ತಂಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಕಳೆದ ತಿಂಗಳು ಸುರಾಳೆ ಸ್ನೇಹಿತ ರೋಹಿತ್ ರೇಗ್ ನಿವಾಸದಲ್ಲಿ ಪಿಸ್ತೂಲ್ ಒಂದು ಪತ್ತೆಯಾಗಿತ್ತು, ಕಾಳೆ ಪಿಸ್ತೂಲ್ ಅನ್ನು ಅಂಡುರೆಗೆ ನೀಡಿದ್ದ, ಅದು ಆತನ ಬಾವಮೈದುನ ಶುಭಂ ಸುರಾಳೆ ಮನೆ ತಲುಪಿತ್ತು, 
ವಶ ಪಡಿಸಿಕೊಂಡಿರುವ ಪಿಸ್ತೂಲ್ ಅನ್ನು ವಿಧಿ  ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿಗಾಗಿ ಇನ್ನೂ ಕಾಯಲಾಗುತ್ತಿದೆ, ಈ ಪ್ರಕರಣ ಸಂಬಂಧ ಕಾಲಸ್ಕರ್ ಎಂಬಾತನನ್ನು ಸಿಬಿಐ ವಶಕ್ಕೆ ಪಡೆದಿದೆ.  ಆತನನ್ನು ಕಳೆದ ತಿಂಗಳು ಮಹಾರಾಷ್ಟ್ರ ಎಟಿಎಸ್ ಪೊಲೀಸರು ಬಂಧಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT