ಐವರು ವಕೀಲರು 
ದೇಶ

ಸೆಕ್ಷನ್ 377 ತೀರ್ಪು: ಐದು ಜನ, ಒಂದು ಕಾರಣ, ಒಂದು ಗೆಲುವಿನ ಹೋರಾಟ

ಭಾರತದಲ್ಲಿ ಸಲಿಂಗ ಕಾಮ ಅಪರಾಧ ಎಂದು ಪರಿಗಣಿಸುವ ಐಪಿಸಿ ಸೆಕ್ಷನ್‌ 377 ಅನ್ನು ರದ್ದುಗೊಳಿಸಿ ಸುಪ್ರೀಂ...

ನವದೆಹಲಿ: ಭಾರತದಲ್ಲಿ ಸಲಿಂಗ ಕಾಮ ಅಪರಾಧ ಎಂದು ಪರಿಗಣಿಸುವ ಐಪಿಸಿ ಸೆಕ್ಷನ್‌ 377 ಅನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ಈ ತೀರ್ಪಿನ ಹಿಂದೆ ಐವರು ವಕೀಲರ ಪಾತ್ರವಿದೆ.
ಲಿಂಗ ಪರಿವರ್ತನೆ ಮಾಡಿಕೊಂಡ(ಎಲ್ ಜಿಬಿಟಿಕ್ಯು) ಸಮುದಾಯಕ್ಕೆ ನ್ಯಾಯ ಕೊಡಿಸಲು ಈ ಐವರು ಒಗ್ಗಟ್ಟಿನ ಹೋರಾಟ ನಡೆಸಿ ಗೆಲುವಿನ ನಗೆ ಬೀರಿದ್ದಾರೆ.
ಈ ಐವರು ವಕೀಲರ ಪೈಕಿ ಒಬ್ಬರು ಮಾತ್ರ ಕೋರ್ಟ್ ನಲ್ಲಿ ವಾದ ಮಂಡಿಸಿದ್ದು, ಉಳಿದ ನಾಲ್ವರು ಬ್ಯಾಕ್ ರೂಮ್ ಸಂಶೋಧನೆಯಲ್ಲಿ ತೊಡಗುವ ಮೂಲಕ ವಾದಗಳಿಗೆ ಮಹತ್ವದ ಕೊಡುಗೆ ನೀಡಿದ್ದಾರೆ.
ಮಾನವೀಯತೆಯಿಂದ ನಾನು ಈ ಪ್ರಕರಣ ತೆಗೆದುಕೊಂಡೆ. ನ್ಯಾಯಕ್ಕಾಗಿ ವೈಯಕ್ತಿಕ ಹೋರಾಟ ನಡೆಸಿದೆ. ನನಗೆ ಇದು ಬರೀ ಒಂದು ಪ್ರಕರಣ ಅಲ್ಲ. ಬಲಿಪಶುವಾಗಿದ್ದ ಬಹಳಷ್ಟು ನನ್ನ ಬಾಲ್ಯ ಸ್ನೇಹಿತರಿಗಾಗಿ ನಡೆಸಿದ ವೈಯಕ್ತಿಕ ಹೋರಾಟ ಎಂದು 30 ವರ್ಷದ ವಕೀಲೆ ನೀಹಾ ನಾಗಪಾಲ್ ಅವರು ಹೇಳಿದ್ದಾರೆ.
ಸಮಾಜ ದೊಡ್ಡ ಸಂಖ್ಯೆಯಲ್ಲಿ ಬದಲಾವಣೆಯನ್ನು ಒಪ್ಪಿಕೊಳ್ಳಬೇಕು ಮತ್ತು ಪ್ರತಿ ವ್ಯಕ್ತಿಗೂ ಸಂವಿಧಾನದತ್ತವಾದ ಸಮಾನ ಹಕ್ಕು ನೀಡಬೇಕು ಎಂದು ನೀಹಾ ತಿಳಿಸಿದ್ದಾರೆ.
ಇನ್ನು ಪ್ರಕರಣದಲ್ಲಿ ತಾವು ನಡೆಸಿದ ಹೋರಾಟವನ್ನು ನೆನಪಿಸಿಕೊಂಡ 36 ವರ್ಷದ ಪ್ರೀತ ಶ್ರೀಕುಮಾರ್ ಅವರು, ಪ್ರತಿಯೊಬ್ಬ ವ್ಯಕ್ತಿಯ ಲೈಂಗಿಕ ದೃಷ್ಟಿಕೋನ ನೈಸರ್ಗಿಕವಾಗಿದ್ದು, ಅದರಲ್ಲಿ ಅಚ್ಚರಿ ಮೂಡಿಸುವಂತದ್ದು ಏನೂ ಇಲ್ಲ. ನಾನು ತಾರತಮ್ಯದ ವಿರುದ್ಧ ಜನರ ಮೂಲಭೂತ ಹಕ್ಕುಗಳಿಗಾಗಿ ಹೋರಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.
ಸಲಿಂಗಿಗಳ ಪರವಾಗಿ ಕೋರ್ಟ್ ನಲ್ಲಿ ಸಮರ್ಥವಾಗಿ ವಾದ ಮಂಡಿಸಿದ 42 ವರ್ಷದ ವಕೀಲೆ ಮನೆಕಾ ಗುರುಸ್ವಾಮಿ ಅವರು, ಎಲ್ಲರಿಗೂ ಸಮಾನತೆ ಸಿಗಬೇಕು ಎಂಬ ನನ್ನ ನಂಬಿಕೆಯೇ ಈ ಪ್ರಕರಣ ಕೈಗೆತ್ತಿಕೊಳ್ಳಲು ಕಾರಣವಾಯಿತು. ನಾನು ಯಾವಾಗಲೂ ನ್ಯಾಯ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಹೋರಾಡಲು ಪ್ರಯತ್ನಿಸುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT