ಕರಣ್ ಜೋಹರ್ 
ದೇಶ

ಸಲಿಂಗಕಾಮದ ಪರ ಸುಪ್ರೀಂ ತೀರ್ಪು ಮಾನವೀಯತೆಗೆ ಸಿಕ್ಕ ಮಹಾಜಯ: ಕರಣ್ ಜೋಹರ್

ಸಲಿಂಗಕಾಮ ಅಪರಾಧವಲ್ಲ ಎಂದು ಮಹತ್ವದ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಬಾಲಿವುಡ್ ನಿರ್ಮಾಪಕ ಕರಣ್ ಜೋಹರ್ ಇದು ಮಾನವೀಯತೆಗೆ ಹಾಗೂ ಸಮಾನ ...

ನವದೆಹಲಿ: ಸಲಿಂಗಕಾಮ ಅಪರಾಧವಲ್ಲ ಎಂದು ಮಹತ್ವದ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಬಾಲಿವುಡ್ ನಿರ್ಮಾಪಕ ಕರಣ್ ಜೋಹರ್ ಇದು ಮಾನವೀಯತೆಗೆ  ಹಾಗೂ ಸಮಾನ ಹಕ್ಕುಗಳಿಗೆ ಸಿಕ್ಕ ಮಹಾಜಯ ಎಂದು ಶ್ಲಾಘಿಸಿದ್ದಾರೆ.
ದೇಶಕ್ಕೆ ಮತ್ತೆ ಆಕ್ಸಿಜನ್ ಸಿಕ್ಕಿದಂತಾಗಿದೆ, ಇದೊಂದು ಐತಿಹಾಸಿಕ ತೀರ್ಪು,  ನನಗೆ ಹೆಮ್ಮೆ ಎನಿಸುತ್ತದೆ,  ಸೆಕ್ಷನ್ 377ರ ವಿಧಿಯ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯುಪೀಠ ವಜಾಗೊಳಿಸಿದ್ದು, ಸಮಾನ ಹಕ್ಕು ಹಾಗೂ ಮಾನವೀಯತೆಗೆ ಸಿಕ್ಕ ಜಯ, ದೇಶ ಮತ್ತೆ ಆಕ್ಸಿಜನ್ ಪಡೆದಿದೆ ಎಂದು ಕರಣ್ ಜೋಹರ್ ಟ್ವೀಟ್ ಮಾಡಿದ್ದಾರೆ. 
ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಪಂಚ ಸದಸ್ಯ ಪೀಠ ಸಲಿಂಗಕಾಮ ಅಪರಾಧವಲ್ಲ ಎಂಬ ತೀರ್ಪು ನೀಡಿದೆ. ಭಾರತದಲ್ಲಿ ಸಲಿಂಗಕಾಮ ಅಪರಾಧವೋ ಅಥವಾ ಇಲ್ಲವೋ ಎಂದು ಪರಿಗಣಿಸುವ, ಭಾರತೀಯ ದಂಡಸಂಹಿತೆ(ಐಪಿಸಿ) ಸೆಕ್ಷನ್ 377ರ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠ ಈ ಮಹತ್ವದ ತೀರ್ಪು ನೀಡಿದೆ.
ಐಪಿಸಿ ಸೆಕ್ಷನ್ 377ರ ವಿಧಿಗೆ ಯಾವುದೇ ತರ್ಕವಿಲ್ಲ ಎಂದು ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಐತಿಹಾಸಿಕ ತೀರ್ಪು ನೀಡಿದೆ. ವೈವಿಧ್ಯತೆಯ ಶಕ್ತಿಯನ್ನು ಗೌರವಿಸುವ ಅಗತ್ಯವಿದೆ ಎಂದು ಸಿಜೆಐ ದೀಪಕ್ ಮಿಶ್ರಾ ಅಭಿಪ್ರಾಯಪಟ್ಟಿದ್ದಾರೆ. ಅಂತೆಯೇ ಪೂರ್ವಾಗ್ರಹಗಳಿಗೆ ಇತಿಶ್ರೀ ಹಾಡಬೇಕಾಗಿದ್ದು, ಸಲಿಂಗಕಾಮಿಗಳಿಗೆ ಬೇರೆಯವರಂತೆಯೇ ಹಕ್ಕಿದೆ ಎಂದು ಸುಪ್ರ್ರೀ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT