ಕರಣ್ ಜೋಹರ್ 
ದೇಶ

ಸಲಿಂಗಕಾಮದ ಪರ ಸುಪ್ರೀಂ ತೀರ್ಪು ಮಾನವೀಯತೆಗೆ ಸಿಕ್ಕ ಮಹಾಜಯ: ಕರಣ್ ಜೋಹರ್

ಸಲಿಂಗಕಾಮ ಅಪರಾಧವಲ್ಲ ಎಂದು ಮಹತ್ವದ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಬಾಲಿವುಡ್ ನಿರ್ಮಾಪಕ ಕರಣ್ ಜೋಹರ್ ಇದು ಮಾನವೀಯತೆಗೆ ಹಾಗೂ ಸಮಾನ ...

ನವದೆಹಲಿ: ಸಲಿಂಗಕಾಮ ಅಪರಾಧವಲ್ಲ ಎಂದು ಮಹತ್ವದ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಬಾಲಿವುಡ್ ನಿರ್ಮಾಪಕ ಕರಣ್ ಜೋಹರ್ ಇದು ಮಾನವೀಯತೆಗೆ  ಹಾಗೂ ಸಮಾನ ಹಕ್ಕುಗಳಿಗೆ ಸಿಕ್ಕ ಮಹಾಜಯ ಎಂದು ಶ್ಲಾಘಿಸಿದ್ದಾರೆ.
ದೇಶಕ್ಕೆ ಮತ್ತೆ ಆಕ್ಸಿಜನ್ ಸಿಕ್ಕಿದಂತಾಗಿದೆ, ಇದೊಂದು ಐತಿಹಾಸಿಕ ತೀರ್ಪು,  ನನಗೆ ಹೆಮ್ಮೆ ಎನಿಸುತ್ತದೆ,  ಸೆಕ್ಷನ್ 377ರ ವಿಧಿಯ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯುಪೀಠ ವಜಾಗೊಳಿಸಿದ್ದು, ಸಮಾನ ಹಕ್ಕು ಹಾಗೂ ಮಾನವೀಯತೆಗೆ ಸಿಕ್ಕ ಜಯ, ದೇಶ ಮತ್ತೆ ಆಕ್ಸಿಜನ್ ಪಡೆದಿದೆ ಎಂದು ಕರಣ್ ಜೋಹರ್ ಟ್ವೀಟ್ ಮಾಡಿದ್ದಾರೆ. 
ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಪಂಚ ಸದಸ್ಯ ಪೀಠ ಸಲಿಂಗಕಾಮ ಅಪರಾಧವಲ್ಲ ಎಂಬ ತೀರ್ಪು ನೀಡಿದೆ. ಭಾರತದಲ್ಲಿ ಸಲಿಂಗಕಾಮ ಅಪರಾಧವೋ ಅಥವಾ ಇಲ್ಲವೋ ಎಂದು ಪರಿಗಣಿಸುವ, ಭಾರತೀಯ ದಂಡಸಂಹಿತೆ(ಐಪಿಸಿ) ಸೆಕ್ಷನ್ 377ರ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠ ಈ ಮಹತ್ವದ ತೀರ್ಪು ನೀಡಿದೆ.
ಐಪಿಸಿ ಸೆಕ್ಷನ್ 377ರ ವಿಧಿಗೆ ಯಾವುದೇ ತರ್ಕವಿಲ್ಲ ಎಂದು ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಐತಿಹಾಸಿಕ ತೀರ್ಪು ನೀಡಿದೆ. ವೈವಿಧ್ಯತೆಯ ಶಕ್ತಿಯನ್ನು ಗೌರವಿಸುವ ಅಗತ್ಯವಿದೆ ಎಂದು ಸಿಜೆಐ ದೀಪಕ್ ಮಿಶ್ರಾ ಅಭಿಪ್ರಾಯಪಟ್ಟಿದ್ದಾರೆ. ಅಂತೆಯೇ ಪೂರ್ವಾಗ್ರಹಗಳಿಗೆ ಇತಿಶ್ರೀ ಹಾಡಬೇಕಾಗಿದ್ದು, ಸಲಿಂಗಕಾಮಿಗಳಿಗೆ ಬೇರೆಯವರಂತೆಯೇ ಹಕ್ಕಿದೆ ಎಂದು ಸುಪ್ರ್ರೀ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT