ಸಂಪುಟ ನಿರ್ಣಯ ಪ್ರತಿ ರಾಜ್ಯಪಾಲರಿಗೆ ಸಲ್ಲಿಸುತ್ತಿರುವ ಕೆಸಿಆರ್ 
ದೇಶ

ತೆಲಂಗಾಣ ವಿಧಾನಸಭೆ ವಿಸರ್ಜನೆ, ಹಂಗಾಮಿ ಸಿಎಂ ಆಗಿ ಕೆಸಿಆರ್ ಮುಂದುವರಿಕೆ

ನಿರೀಕ್ಷೆಯಂತೆಯೇ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರು ಅವಧಿಗೂ ಮುನ್ನವೇ ವಿಧಾನಸಭೆ ಚುನಾವಣೆಗೆ ತೆರಳಲು ನಿರ್ಧರಿಸಿದ್ದು, ಈ ಸಂಬಂಧ ಇಂದು ನಡೆದ ಸಂಪುಟ ಸಭೆಯಲ್ಲಿ ವಿಧಾನಸಭೆ ವಿಸರ್ಜನೆಗೆ ನಿರ್ಣಯ ಕೈಗೊಳ್ಳಲಾಗಿದೆ.

ಹೈದರಾಬಾದ್: ನಿರೀಕ್ಷೆಯಂತೆಯೇ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಅವಧಿಗೂ ಮುನ್ನವೇ ವಿಧಾನಸಭೆ ಚುನಾವಣೆಗೆ ತೆರಳಲು ನಿರ್ಧರಿಸಿದ್ದು, ಈ ಸಂಬಂಧ ಗುರುವಾರ ನಡೆದ ಸಂಪುಟ ಸಭೆಯಲ್ಲಿ ವಿಧಾನಸಭೆ ವಿಸರ್ಜನೆಗೆ ನಿರ್ಣಯ ಕೈಗೊಳ್ಳಲಾಗಿದೆ.
ಇಂದು ಬೆಳಗ್ಗೆ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಕೆಸಿಆರ್ ನಿರ್ಣಯಕ್ಕೆ ಸಂಪುಟ ಸಭೆಯಲ್ಲಿ ಅವಿರೋಧ ಒಪ್ಪಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಬಳಿಕ ಸಿಎಂ ಕೆಸಿಆರ್ ಅವರು ರಾಜಭವನಕ್ಕೆ ತೆರಳಿ ಅಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ವಿಧಾನಸಭೆ ವಿಸರ್ಜಿಸುವ ಸಂಪುಟ ನಿರ್ಣಯದ ಪ್ರತಿಯನ್ನು ಸಲ್ಲಿಸಿದರು. ನಿರ್ಣಯವನ್ನು ರಾಜ್ಯಪಾಲರು ಅಂಗೀಕರಿಸಿದ್ದು, ನೂತನ ಸರ್ಕಾರ ರಚನೆಯಾಗುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಕೆಸಿಆರ್ ಅವರಿಗೆ ಸೂಚಿಸಿದ್ದಾರೆ.
ಹೊಸದಾಗಿ ರಾಜ್ಯ ರಚನೆಯಾದ ನಂತರ 2013ರಲ್ಲಿ ಲೋಕಸಭೆ ಜತೆಗೇ ತೆಲಂಗಾಣ ವಿಧಾನಸಭೆಗೂ ಚುನಾವಣೆ ನಡೆದಿತ್ತು. ತೆಲಂಗಾಣ ಮೊದಲ ವಿಧಾನಸಭೆಯ ಅವಧಿ 2019ರ ಏಪ್ರಿಲ್​-ಮೇ ವರೆಗೆ ಇದೆಯಾದರೂ, ಇದೇ ನವೆಂಬರ್​ ಮತ್ತು ಡಿಸೆಂಬರ್​ನಲ್ಲಿ ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಅದರ ಜತೆಗೇ ಚುನಾವಣೆ ಎದುರಿಸಲು ಕೆಸಿಆರ್​ ತೀರ್ಮಾನಿಸಿದ್ದಾರೆ. 
ಚುನಾವಣೆಗೆ ಪೂರ್ವಭಾವಿ ಸಿದ್ಧತೆ ಎಂಬಂತೆ ಟಿಆರ್ ಎಸ್ ಸರ್ಕಾರ ಇತ್ತೀಚೆಗಷ್ಟೇ ನೌಕರರು, ಕಾರ್ಮಿಕರು ಹಾಗೂ ರೈತರಿಗೆ ಭರ್ಜರಿ ಕೊಡುಗೆಗಳನ್ನು ಪ್ರಕಟಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT