ಬಿಜೆಪಿ ಶಾಸಕ ರಾಮ್ ಕದಂ 
ದೇಶ

ಬಿಜೆಪಿ ಶಾಸಕನ ನಾಲಿಗೆ ಕತ್ತರಿಸಿದವರಿಗೆ ರೂ.5 ಲಕ್ಷ ಇನಾಮು: ಕಾಂಗ್ರೆಸ್ ನಾಯಕ

ಯುವತಿಯನ್ನು ಅಪಹರಣ ಮಾಡಿಯಾದರೂ ಹುಡುಗನಿಗೆ ಒಪ್ಪಿಸುತ್ತೇನೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ರಾಮ್ ಕದಂಗ್' ಅವರ ನಾಲಿಗೆ ಕತ್ತರಿಸಿದವರಿಗೆ ರೂ.5 ಲಕ್ಷ ಬಹುಮಾನ ನೀಡುತ್ತೇನೆಂದು ಕಾಂಗ್ರೆಸ್ ಮಾಜಿ ಸಚಿವರೊಬ್ಬರು...

ಬುಲ್ಧಾನ: ಯುವತಿಯನ್ನು ಅಪಹರಣ ಮಾಡಿಯಾದರೂ ಹುಡುಗನಿಗೆ ಒಪ್ಪಿಸುತ್ತೇನೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ರಾಮ್ ಕದಂ' ಅವರ ನಾಲಿಗೆ ಕತ್ತರಿಸಿದವರಿಗೆ ರೂ.5 ಲಕ್ಷ ಬಹುಮಾನ ನೀಡುತ್ತೇನೆಂದು ಕಾಂಗ್ರೆಸ್ ಮಾಜಿ ಸಚಿವರೊಬ್ಬರು ಹೇಳಿದ್ದಾರೆ. 
ಶಾಸಕ ಕದಂ ನಾಲಿಕೆ ಕತ್ತರಿಸಿದವರಿಗೆ ರೂ.5 ಲಕ್ಷ ಇನಾಮು ನೀಡುವುದಾಗಿ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಸುಬೀಧ್ ಸಯೋಜಿ ಹೇಳಿದ್ದು, ಈ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. 
ಯುವತಿಯನ್ನು ಅಪಹರಣ ಮಾಡುತ್ತೇನೆಂದು ಹೇಳಿದ್ದ ಶಾಸಕ ಕದಂ ನಾಲಿಗೆ ಕತ್ತರಿಸಲು ಮುಂದೆ ಬರುವವರಿಗೆ ರೂ.5 ಲಕ್ಷ ಇನಾಮು ನೀಡುವುದಾಗಿ ಸುಬೀಧ್ ಹೇಳಿಕೊಂಡಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ನಡೆದಿದ್ದ ದಹಿ ಹಂಡಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಬಿಜೆಪಿ ಶಾಸಕ ಕದಂ ಅವರು, ಹುಡುಗ ಇಷ್ಟಪಡುವ ಹುಡುಗಿಯನ್ನು ಅಪಹರಣ ಮಾಡಿಯಾದರೂ ತಂದು ಒಪ್ಪಿಸುತ್ತೇನೆಂದು ಹೇಳಿದ್ದರು. ಕದಂ ಅವರ ಈ ಹೇಳಿಕೆಗೆ ದೇಶದಾದ್ಯಂತ ತೀವ್ರ ವಿರೋಧಗಳು ವ್ಯಕ್ತವಾಗಿದ್ದವು. ಅಲ್ಲದೆ, ಮಹಾರಾಷ್ಟ್ರ ರಾಜ್ಯದ ಮಹಿಳಾ ಆಯೋಗದಿಂದ ಕದಂ ಅವರಿಗೆ ನೋಟಿಸ್ ಕೂಡ ಜಾರಿಯಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT