ರಸ್ತೆ ಸಂಪರ್ಕವಿಲ್ಲ: ತುಂಬು ಗರ್ಭಿಣಿಯನ್ನು 4 ಕಿ.ಮೀ ಕಾಡಿನಲ್ಲಿ ಹೊತ್ತೊಯ್ದ ಸಂಬಂಧಿಕರು, ಮಾರ್ಗಮಧ್ಯೆ ಹೆರಿಗೆ 
ದೇಶ

ಹೈದರಾಬಾದ್: ತುಂಬು ಗರ್ಭಿಣಿಯನ್ನು 4 ಕಿ.ಮೀ ಕಾಡಿನಲ್ಲಿ ಹೊತ್ತೊಯ್ದ ಸಂಬಂಧಿಕರು, ಮಾರ್ಗಮಧ್ಯೆ ಹೆರಿಗೆ

ದೇಶಕ್ಕೆ ಸ್ವಾತಂತ್ರ್ಯ ಬಂದು ಹಲವು ವರ್ಷಗಳು ಕಳೆದರೂ ಈಗಲೂ ಸೂಕ್ತ ರೀತಿಯ ರಸ್ತೆ ಸಂಪರ್ಕಗಳಿಲ್ಲದ ಜನರು ಸಂಕಷ್ಟದಲ್ಲಿ ಜೀವನ ನಡೆಸುತ್ತಿರುವುದು ಮುಂದುವರೆದಿದೆ. ಇದಕ್ಕೆ ಸಾಕ್ಷಿ ಎಂಬಂತೆ ಆಂಧ್ರಪ್ರದೇಶದಲ್ಲಿ...

ವಿಜಯವಾಡ: ದೇಶಕ್ಕೆ ಸ್ವಾತಂತ್ರ್ಯ ಬಂದು ಹಲವು ವರ್ಷಗಳು ಕಳೆದರೂ ಈಗಲೂ ಸೂಕ್ತ ರೀತಿಯ ರಸ್ತೆ ಸಂಪರ್ಕಗಳಿಲ್ಲದ ಜನರು ಸಂಕಷ್ಟದಲ್ಲಿ ಜೀವನ ನಡೆಸುತ್ತಿರುವುದು ಮುಂದುವರೆದಿದೆ. ಇದಕ್ಕೆ ಸಾಕ್ಷಿ ಎಂಬಂತೆ ಆಂಧ್ರಪ್ರದೇಶದಲ್ಲಿ ಸಂಬಂಧಿಕರು ತುಂಬು ಗರ್ಭಿಣಿಯೊಬ್ಬರನ್ನು ಕಾಡಿನಲ್ಲಿ ಸುಮಾರು 4 ಕಿ.ಮೀವರೆಗೂ ಹೊತ್ತೊಯ್ದ ಘಟನೆ ಬೆಳಕಿಗೆ ಬಂದಿದೆ. 
ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಗ್ರಾಮವೊಂದರಲ್ಲಿ ತುಂಬು ಗರ್ಭಿಣಿಯನ್ನು ಆಕೆ ಸಂಬಂಧಿಕರು ಕಾಡಿನ ಮಧ್ಯೆಯೇ ಹೊತ್ತುಕೊಂಡು ಹೋಗಿದ್ದಾರೆ. ಗ್ರಾಮದಿಂದ 7 ಕಿ.ಮೀವರೆಗೂ ಯಾವುದೇ ಆಸ್ಪತ್ರೆಗಳಿಲ್ಲ. ದುರಾದೃಷ್ಟಕರ ಸಂಗತಿಯೆಂದರೆ, ಈ ಗ್ರಾಮಕ್ಕೆ ರಸ್ತೆ ಸಂಪರ್ಕ ಕೂಡ ಸೂಕ್ತವಾಗಿಲ್ಲ. ಹೀಗಾಗಿ ಮಹಿಳೆಯನ್ನು ಸಂಬಂಧಿಕರೇ ಮರದ ಕಟ್ಟಿಗೆಯ ನೆರವಿನಿಂದ ಕಾಡಿನಲ್ಲಿಯೇ ಹೊತ್ತುಕೊಂಡು ಹೋಗಿದ್ದಾರೆ. 
ಈ ವೇಳೆ ಮಹಿಳೆಗೆ ಹೆರಿಗೆ ನೋವು ಹೆಚ್ಚಾಗಿದೆ. ಈ ವೇಳೆ ಸಂಬಂಧಿಕರು ಮಹಿಳೆಯನ್ನು ಕೆಳಗಿಳಿಸಿದ್ದಾರೆ. ಬಳಿಕ ಸಂಬಂಧಿಕರ ಸಹಾಯದೊಂದಿಗೆ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ. ಸೆ.4 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 
ಜುಲೈ.29ರಂದೂ ಕೂಡ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯೇ ಇದೇ ರೀತಿಯ ಮತ್ತೊಂದು ಘಟನೆ ವರದಿಯಾಗಿತ್ತು. ರಸ್ತೆ ಸಂಪರ್ಕವಲ್ಲದ ಕಾರಣ ಗರ್ಭಿಣಿ ಮಹಿಳೆಯನ್ನು ಸಂಬಂಧಿಕರು 12 ಕಿ.ಮೀವರೆಗೂ ಆಕೆಯನ್ನು ಆಸ್ಪತ್ರೆಗೆ ಹೊತ್ತೊಯ್ದಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯಕ್ಕೆ 3,705 ಕೋಟಿ ರೂ. ತೆರಿಗೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ..!

ಪೇಸ್‌ಮೇಕರ್‌ ಅಳವಡಿಕೆ ಯಶಸ್ವಿ: ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ, ಆಸ್ಪತ್ರೆಯಿಂದ ಡಿಸ್‌ಚಾರ್ಜ್

Karnataka Rains- ಬೆಂಗಳೂರು ಸೇರಿ ರಾಜ್ಯಾದ್ಯಂತ ಅ.9ರವರೆಗೆ ಮಳೆ

Madhya Pradesh: ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ದುರಂತ, ಮಹಿಳೆಯರು, ಮಕ್ಕಳು ಸೇರಿದಂತೆ 14 ಮಂದಿ ಸಾವು!Video

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ

SCROLL FOR NEXT