ಒ ಪಿ ರಾವತ್ 
ದೇಶ

ತೆಲಂಗಾಣ ವಿಧಾನಸಭೆಗೆ ಶೀಘ್ರ ಚುನಾವಣೆ, ಹಂಗಾಮಿ ಸರ್ಕಾರ ಮುಂದುವರಿಯುವಂತಿಲ್ಲ: ರಾವತ್

ತೆಲಂಗಾಣ ವಿಧಾನಸಭೆಗೆ ಶೀಘ್ರ ಚುನಾವಣೆ ನಡೆಯಲಿದೆ ಮತ್ತು ಹಂಗಾಮಿ ಸರ್ಕಾರ ಮುಂದುವರೆಯುವಂತಿಲ್ಲ...

ನವದೆಹಲಿ: ತೆಲಂಗಾಣ ವಿಧಾನಸಭೆಗೆ ಶೀಘ್ರ ಚುನಾವಣೆ ನಡೆಯಲಿದೆ ಮತ್ತು ಹಂಗಾಮಿ ಸರ್ಕಾರ ಮುಂದುವರೆಯುವಂತಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಒ ಪಿ ರಾವತ್ ಅವರು ಶುಕ್ರವಾರ ಹೇಳಿದ್ದಾರೆ. ಈ ಮೂಲಕ ಡಿಸೆಂಬರ್ ನಲ್ಲಿ ಇತರೆ ನಾಲ್ಕು ರಾಜ್ಯಗಳೊಂದಿಗೆ ತೆಲಂಗಾಣ ವಿಧಾನಸಭೆ ಚುನಾವಣೆ ನಡೆಸುವ ಸೂಚನೆ ನೀಡಿದ್ದಾರೆ.
ಆದಾಗ್ಯೂ, ಹೆಚ್ಚಿನ ರಾಜ್ಯಗಳು ಅವಧಿಗೂ ಮುನ್ನವೇ ಚುನಾವಣೆ ಎದುರಿಸಲು ನಿರ್ಧರಿಸಿದರೆ ಚುನಾವಣಾ ಬೃಹತ್ ಪ್ರಕ್ರಿಯೆಗೆ ತೊಂದರೆಯಾಗುತ್ತದೆ ಎಂದು ರಾವತ್ ಹೇಳಿದ್ದಾರೆ.
ವಿಧಾನಸಭೆ ವಿಸರ್ಜನೆಯಾದರೆ ಮೊದಲು ಚುನಾವಣೆ ನಡೆಸಬೇಕು. ಏಕೆಂದರೆ ಹಂಗಾಮಿ ಸರ್ಕಾರ ಮುಂದುವರೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ಇದೆ. ವಿಧಾನಸಭೆ ವಿಸರ್ಜಿಸಿ ಆರು ತಿಂಗಳು ಹಂಗಾಮಿ ಸರ್ಕಾರ ನಡೆಸಲು ಅವಕಾಶ ಇಲ್ಲ ಎಂದು ರಾವತ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಡಿಸೆಂಬರ್ ನಲ್ಲಿ ಮಧ್ಯ ಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ ಮತ್ತು ಮಿಜೋರಾಂ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಕೇಂದ್ರ ಚುನಾವಣಾ ಆಯೋಗ ಆ ನಾಲ್ಕು ರಾಜ್ಯಗಳೊಂದಿಗೆ ತೆಲಂಗಾಣ ವಿಧಾನಸಭೆ ಚುನಾವಣೆ ನಡೆಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT