ಸಾಂದರ್ಭಿಕ ಚಿತ್ರ 
ದೇಶ

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ: ಜಗಳ ಬಿಡಿಸಲು ಬಂದ ವ್ಯಕ್ತಿಯನ್ನೇ ಇರಿದು ಕೊಂದ ಪಾಪಿ

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ ಕಾರಣಕ್ಕೆ ಇಬ್ಬರ ನಡುವೆ ಜಗಳ ಏರ್ಪಟ್ಟಿದ್ದು, ಈ ವೇಳೆ ಜಗಳ ಬಿಡಿಸಲು ಮುಂದಾಗಿದ್ದ ವ್ಯಕ್ತಿಯನ್ನೇ ಇರಿದು ಹತ್ಯೆ ಮಾಡಿರುವ ಘಟನೆ ರಾಜಧಾನಿ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ...

ನವದೆಹಲಿ: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ ಕಾರಣಕ್ಕೆ ಇಬ್ಬರ ನಡುವೆ ಜಗಳ ಏರ್ಪಟ್ಟಿದ್ದು, ಈ ವೇಳೆ ಜಗಳ ಬಿಡಿಸಲು ಮುಂದಾಗಿದ್ದ ವ್ಯಕ್ತಿಯನ್ನೇ ಇರಿದು ಹತ್ಯೆ ಮಾಡಿರುವ ಘಟನೆ ರಾಜಧಾನಿ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ. 
ಲೊನಿಯ ನಿವಾಸಿಯಾಗಿರುವ ವಸೀಂ ಮೃತ ದುರ್ದೈವಿ ಎಂದು ಹೇಳಲಾಗುತ್ತಿದೆ. ಹತ್ಯೆ ಮಾಡಿದವರ ಕುರಿತು ಈವರೆಗೂ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. 
ತನ್ನ ಸಂಬಂಧಿಕ ಹಾಗೂ ಸಹೋದರನೊಂದಿಗೆ ವಸೀಂ ಆಟೋದಲ್ಲಿ ಹೋಗುತ್ತಿದ್ದ. ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಈ ವೇಳೆ ಸಹಾಯ ಕೇಳಿದ್ದಾರೆ. ಏನಾಯಿತು ಎಂದು ತಿಳಿಯುವ ಸಲುವಾಗಿ ವಸೀಂ ಆಟೋ ನಿಲ್ಲಿಸಿ ವಿಚಾರಿಸಿದ್ದಾನೆ. ಸಾರ್ವಜನಿಕ ಸ್ಥಳದಲ್ಲಿ ವರುಣ್ ಎಂಬಾತ ಮೂತ್ರ ವಿಸರ್ಜನೆ ಮಾಡುತ್ತಿದ್ದ ಕಾರಣಕ್ಕೆ ಮತ್ತೊಬ್ಬ ವ್ಯಕ್ತಿಯೊಂದಿಗೆ ಜಗಳವಾಗುತ್ತಿರುವುದು ತಿಳಿದಿದೆ. ಈ ವೇಳೆ ಮಧ್ಯೆ ಪ್ರವೇಶಿಸಿದ ವಸೀಂ ಜಗಳ ಬಿಡಿಸಲು ಮುಂದಾಗಿದ್ದಾರೆ. ಇದರಿಂದ ಉದ್ರಿಕ್ತನಾದ ವ್ಯಕ್ತಿಯೊಬ್ಬ ವಸೀಂನನ್ನೇ ಇರಿದು ಹತ್ಯೆ ಮಾಡಿದ್ದಾನೆಂದು ತಿಳಿದುಬಂದಿದೆ. 
ಇರಿತಕ್ಕೊಳಗಾದ ವಸೀಂ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT