ಸಾಂದರ್ಭಿಕ ಚಿತ್ರ 
ದೇಶ

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ: ಜಗಳ ಬಿಡಿಸಲು ಬಂದ ವ್ಯಕ್ತಿಯನ್ನೇ ಇರಿದು ಕೊಂದ ಪಾಪಿ

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ ಕಾರಣಕ್ಕೆ ಇಬ್ಬರ ನಡುವೆ ಜಗಳ ಏರ್ಪಟ್ಟಿದ್ದು, ಈ ವೇಳೆ ಜಗಳ ಬಿಡಿಸಲು ಮುಂದಾಗಿದ್ದ ವ್ಯಕ್ತಿಯನ್ನೇ ಇರಿದು ಹತ್ಯೆ ಮಾಡಿರುವ ಘಟನೆ ರಾಜಧಾನಿ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ...

ನವದೆಹಲಿ: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ ಕಾರಣಕ್ಕೆ ಇಬ್ಬರ ನಡುವೆ ಜಗಳ ಏರ್ಪಟ್ಟಿದ್ದು, ಈ ವೇಳೆ ಜಗಳ ಬಿಡಿಸಲು ಮುಂದಾಗಿದ್ದ ವ್ಯಕ್ತಿಯನ್ನೇ ಇರಿದು ಹತ್ಯೆ ಮಾಡಿರುವ ಘಟನೆ ರಾಜಧಾನಿ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ. 
ಲೊನಿಯ ನಿವಾಸಿಯಾಗಿರುವ ವಸೀಂ ಮೃತ ದುರ್ದೈವಿ ಎಂದು ಹೇಳಲಾಗುತ್ತಿದೆ. ಹತ್ಯೆ ಮಾಡಿದವರ ಕುರಿತು ಈವರೆಗೂ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. 
ತನ್ನ ಸಂಬಂಧಿಕ ಹಾಗೂ ಸಹೋದರನೊಂದಿಗೆ ವಸೀಂ ಆಟೋದಲ್ಲಿ ಹೋಗುತ್ತಿದ್ದ. ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಈ ವೇಳೆ ಸಹಾಯ ಕೇಳಿದ್ದಾರೆ. ಏನಾಯಿತು ಎಂದು ತಿಳಿಯುವ ಸಲುವಾಗಿ ವಸೀಂ ಆಟೋ ನಿಲ್ಲಿಸಿ ವಿಚಾರಿಸಿದ್ದಾನೆ. ಸಾರ್ವಜನಿಕ ಸ್ಥಳದಲ್ಲಿ ವರುಣ್ ಎಂಬಾತ ಮೂತ್ರ ವಿಸರ್ಜನೆ ಮಾಡುತ್ತಿದ್ದ ಕಾರಣಕ್ಕೆ ಮತ್ತೊಬ್ಬ ವ್ಯಕ್ತಿಯೊಂದಿಗೆ ಜಗಳವಾಗುತ್ತಿರುವುದು ತಿಳಿದಿದೆ. ಈ ವೇಳೆ ಮಧ್ಯೆ ಪ್ರವೇಶಿಸಿದ ವಸೀಂ ಜಗಳ ಬಿಡಿಸಲು ಮುಂದಾಗಿದ್ದಾರೆ. ಇದರಿಂದ ಉದ್ರಿಕ್ತನಾದ ವ್ಯಕ್ತಿಯೊಬ್ಬ ವಸೀಂನನ್ನೇ ಇರಿದು ಹತ್ಯೆ ಮಾಡಿದ್ದಾನೆಂದು ತಿಳಿದುಬಂದಿದೆ. 
ಇರಿತಕ್ಕೊಳಗಾದ ವಸೀಂ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT